ಗಾಂಧೀಜಿ ಅವರ ಬದುಕು, ನುಡಿಮುತ್ತುಗಳು ನಮ್ಮ ಬದುಕಿಗೆ ಆದರ್ಶ- ಡಿ.ಕೆ. ಶಿವಕುಮಾರ್

ಬೆಂಗಳೂರು: ಇಂದು ದೇಶದ ಇಬ್ಬರು ಮಹಾಚೇತನರಾದ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಿಸಿ ಅವರ ದೂರದೃಷ್ಟಿಯನ್ನು ನೆನೆಯುವ ದಿನ. ಗಾಂಧೀಜಿ ಅವರ ಬದುಕು, ನುಡಿಮುತ್ತುಗಳು ನಮ್ಮ ಬದುಕಿಗೆ ಆದರ್ಶ. ಅವರ ಅಹಿಂಸೆ ಹೋರಾಟದ ಸಂದೇಶವನ್ನು ಇಡೀ ಪ್ರಪಂಚ ಒಪ್ಪಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಹೋರಾಡುವಾಗ ನಮ್ಮನ್ನು ಬಂದೂಕಿನ ಗುಂಡಿನ ಮೂಲಕ ಕುಗ್ಗಿಸಬಹುದು ಎಂದು ಬ್ರಿಟೀಷರು ಭಾವಿಸಿದ್ದರು. ಆದರೆ ನಮ್ಮ ನಾಯಕರುಗಳು ಆ ಗುಂಡಿಗೆ ಎದೆಕೊಟ್ಟು ಪ್ರಾಣತ್ಯಾಗ ಮಾಡಿದ ಪರಿಣಾಮ ಇಂದು ದೇಶದಲ್ಲಿ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಸ್ಥಾಪಿತವಾಗಿದೆ.

ಈ ದೇಶದಲ್ಲಿ ಸ್ವಾತಂತ್ರ್ಯ ತಂದುಕೊಟ್ಟ ನಮ್ಮ ಪಕ್ಷ 60 ವರ್ಷಗಳ ಕಾಲ ಆಡಳಿತ ಮಾಡಿ ಸಂವಿಧಾನ, ತ್ರಿವರ್ಣ ಧ್ವಜ, ರಾಷ್ಟ್ರಗೀತೆ, ಅನೇಕ ತಿದ್ದುಪಡಿಗಳು ನೂರಾರು ಕಾನೂನುಗಳನ್ನು ನೀಡಿದೆ. ಆ ಮೂಲಕ ಸರ್ವರಿಗೂ ಸಮಬಾಳು ಸಮಪಾಲು ತತ್ವದ ಮೂಲಕ ಕಾರ್ಯಕ್ರಮ ರೂಪಿಸುತ್ತಿದ್ದೇವೆ.

“ದೇವರಿಗೆ ಯಾವುದೇ ಧರ್ಮವಿಲ್ಲ, ಸಬ್ಕೋ ಸನ್ಮತಿ ದೇ ಭಗವಾನ್” ಎಂದು ಗಾಂಧೀಜಿ ಹೇಳಿದ್ದಾರೆ. ಗಾಂಧೀಜಿ ಅವರು ಮುನ್ನಡೆಸಿದ ಪಕ್ಷದಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹೆಗಲ ಮೇಲೆ ಹಾಕಿಕೊಂಡು ಕೆಲಸ ಮಾಡುತ್ತಿರುವ ನಾವು ಹೆಮ್ಮೆಪಡಬೇಕು. ಗಾಂಧಿ ಅವರು ದೇಶದ ಪ್ರಧಾನಿ ಆಗಬಹುದಿತ್ತು. ಆದರೆ ಅವರು ಮಹಾತ್ಮರಾಗಿ ಉಳಿದು, ತಮ್ಮ ದೂರದೃಷ್ಟಿಯಿಂದ ಪಂಡಿತ್ ಜವಾಹರ್ ಲಾಲ್ ನೆಹರೂ ಅವರಿಗೆ ಜವಾಬ್ದಾರಿ ನೀಡಿದರು.

“ಪಾಪವನ್ನು ದ್ವೇಷಿಸಿ, ಪಾಪಿಯನ್ನು ಪ್ರೀತಿಸಿ” ಎಂಬ ಸಂದೇಶವನ್ನು ಗಾಂಧೀಜಿ ಅವರು ಕೊಟ್ಟಿದ್ದಾರೆ. ನಾನು ಅನೇಕ ಸಂದರ್ಭದಲ್ಲಿ ಗಾಂಧಿ ಅವರ ಮಾತನ್ನು ಹೇಳುತ್ತಿರುತ್ತೇನೆ. “ನಾವು ನಮ್ಮನ್ನು ನಿಯಂತ್ರಿಸಿಕೊಳ್ಳಬೇಕಾದರೆ ಬುದ್ದಿಯನ್ನು ಪ್ರಯೋಗಿಸಬೇಕು, ನಾವು ಬೇರೆಯವರನ್ನು ನಿಯಂತ್ರಿಸಬೇಕಾದರೆ ಪ್ರೀತಿಯನ್ನು ಪ್ರಯೋಗಿಸಬೇಕು” ಎಂದು ಹೇಳಿದ್ದಾರೆ.

ದೇಶಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನಾವೆಲ್ಲರೂ ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗಾಂಧೀಜಿ ಅವರು 18 ಬಾರಿ ಕರ್ನಾಟಕಕ್ಕೆ ಬಂದಿದ್ದಾರೆ. 1924ರಲ್ಲಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ನಂಜನಗೂಡಿನ ಬದನಾಳು ಗ್ರಾಮಕ್ಕೆ ಗಾಂಧಿ ಅವರು ಎರಡು ಬಾರಿ ಭೇಟಿ ನೀಡಿದ್ದರು. ಸುಮಾರು 30-40 ವರ್ಷಗಳಿಂದ ಇಲ್ಲಿನ ಸವರ್ಣಿಯರು ಹಾಗೂ ದಲಿತರ ನಡುವೆ ಬಿರುಕು ಮೂಡಿತ್ತು, ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಎರಡೂ ಸಮುದಾಯವನ್ನು ಒಂದುಗೂಡಿಸಿ ಎರಡೂ ಕೇರಿಗಳ ನಡುವಣ ರಸ್ತೆಯನ್ನು ಮತ್ತೆ ತೆರೆದು ಅದಕ್ಕೆ ಭಾರತ ಜೋಡೋ ರಸ್ತೆ ಎಂದು ನಾಮಕರಣ ಮಾಡಲಾಯಿತು. ಆಮೂಲಕ ಇತಿಹಾಸ ಬರೆಯಲಾಯಿತು. ಇದು ಕಾಂಗ್ರೆಸ್ ಪಕ್ಷದ ಶಕ್ತಿ ಹಾಗೂ ಇತಿಹಾಸ. ಕಾಂಗ್ರೆಸ್ ಪಕ್ಷ ಸದಾ ಹೃದಯಗಳನ್ನು ಬೆಸೆಯುವ ಕೆಲಸ ಮಾಡಿಕೊಂಡು ಬಂದಿವೆ.

ಪ್ರತಿ ಹಳ್ಳಿಯಲ್ಲಿ ಶಾಲೆ, ಸಹಕಾರ ಸಂಸ್ಥೆ ಇರಬೇಕು ಎಂದು ವಾದ ಮಾಡುತ್ತಿದ್ದೇವೆ. ನಿಜವಾದ ಭಾರತ ಅದರ ಪ್ರಜೆಗಳಲ್ಲಿ ಅಲ್ಲ ಇಲ್ಲಿರುವ 7 ಲಕ್ಷ ಹಳ್ಳಿಗಳಲ್ಲಿ ಅಡಗಿದೆ ಎಂದು ಗಾಂಧಿ ಅವರು ಸಂದೇಶ ನೀಡಿದ್ದರು.

ಇಲ್ಲಿರುವ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೀರಿ. ನಿಮ್ಮ ಮುಂದೆ ಬಹಳ ದೊಡ್ಡ ಜವಾಬ್ದಾರಿ ಇದೆ. ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು, ಒಂದಾಗಿದ್ದಾರೆ. ಸರ್ಕಾರ ತೆಗೆದವರ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಈ ಅಪವಿತ್ರ ಮೈತ್ರಿ ಸರಿಯಿಲ್ಲ ಎಂದು ಅನೇಕ ನಾಯಕರು ಆ ಪಕ್ಷ ತೊರೆದು ಕಾಂಗ್ರೆಸ್ ಸೇರಲು ಮುಂದೆ ಬರುತ್ತಿದ್ದಾರೆ.

ಕಾರ್ಯಕರ್ತರ ಭಾವನೆ ಬಗ್ಗೆ ನಮಗೆ ಅರಿವಿದೆ. ನಾವು ನುಡಿದಂತೆ ನಡೆಯಲು ಕೊಟ್ಟ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆಮೂಲಕ ನೀವು ಜನರ ಬಳಿ ಹೋಗಲು, ಪಕ್ಷ ಸಂಘಟನೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಗ್ರಾಮ ಸ್ವರಾಜ್ಯ ಗಾಂಧೀಜಿ ಕೊಟ್ಟ ದೊಡ್ಡ ಕೊಡುಗೆ. ನಮ್ಮ ಪಕ್ಷ ರಾಜೀವ್ ಗಾಂಧಿ ಅವರ ನೇತೃತ್ವದ ಸರ್ಕಾರ ಸಂವಿಧಾನಕ್ಕೆ 73, 74ನೇ ತಿದ್ದುಪಡಿ ನೀಡಿ ಶಕ್ತಿ ನೀಡಿದೆವು. ಜೆ.ಹೆಚ್ ಪಟೇಲ್ ಅವರ ಕಾಲದಲ್ಲಿ ಪಂಚಾಯ್ತಿಗಳಿಗೆ 1 ಲಕ್ಷ ಅನುದಾನ ನೀಡಲಾಗುತ್ತಿತ್ತು. ಕೃಷ್ಣ ಅವರ ಕಾಲದಲ್ಲಿ ಪಂಚಾಯ್ತಿಗೆ 23 ಇಲಾಖೆಗಳನ್ನು ಸೇರಿಸಿ ಹೆಚ್ಚಿನ ಅನುದಾನ ನೀಡಿ ಶಕ್ತಿ ನೀಡಿದೆವು. ಪರಿಣಾಮ ಇಂದು ಪಂಚಾಯ್ತಿಗಳೇ ಸರ್ಕಾರವಾಗಿ ಆಡಳಿತ ನಡೆಸುವಂತೆ ಮಾಡಿದ್ದೇವೆ.

ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಸ್ಥಳೀಯ ಮಟ್ಟದಲ್ಲಿ ನಾಯಕತ್ವ ಬೆಳೆಸಿಕೊಳ್ಳಲು ಸಿದ್ಧರಾಗಬೇಕು. ಶಾಸಕರಾಗುವ ಮುನ್ನ ಸ್ಥಳೀಯ ಮಟ್ಟದಲ್ಲಿ ನಾಯಕರಾಗಬೇಕು. ನಾನು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿ, ಸಹಕಾರಿ ಸಂಘದ ನಿರ್ದೇಶಕನಾಗಿದ್ದೆ. ರಾಮಲಿಂಗಾ ರೆಡ್ಡಿ ಪಾಲಿಕೆ ಸದಸ್ಯರಾಗಿದ್ದರು. ನಮ್ಮ ಕಾರ್ಯಾಧ್ಯಕ್ಷರು ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದರು. ಬಿ.ಡಿ ಜತ್ತಿ ಅವರು ಕೂಡ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿದ್ದರು. ನೆಹರೂ ಅವರು ಕೂಡ ಅಲಹಬಾದ್ ಮುನ್ಸಿಪಲ್ ಅದ್ಯಕ್ಷರಾಗಿದ್ದರು, ಕೆಂಗಲ್ ಹನುಮಂತಯ್ಯ ಪಾಲಿಕೆ ಅಧ್ಯಕ್ಷರಾಗಿದ್ದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರಂ ಸಿಂಗ್ ಅವರು ಕೂಡ ಕಾರ್ಪೊರೇಟರ್ ಗಳಾಗಿದ್ದರು. ನಿಮ್ಮ ದಿಕ್ಕು, ನಾಯಕತ್ವ ಬೂತ್ ಹಾಗೂ ಪಂಚಾಯ್ತಿ ಮಟ್ಟದಲ್ಲಿ ಇರಬೇಕು ಎಂದು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ ಎಂದು ಸಲಹೆ ನೀಡುತ್ತೇನೆ.

ನಮ್ಮ ಸರ್ಕಾರ ಅಧಿಕಾರ ತಂದಿರುವ ನಿಮಗೆ ಧನ್ಯವಾದಗಳು, ಮುಂದಿನ ದಿನಗಳಲ್ಲೂ ನೀವು ಒಟ್ಟಾಗಿ ತಾಳ್ಮೆಯಿಂದ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ ಎಂದರು.

Gayathri SG

Recent Posts

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

12 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

23 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

37 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

52 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

53 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

1 hour ago