ಬೆಂಗಳೂರು: ನಾಯಿ ಬೊಗಳಿತ್ತೆಂದು ನಾಯಿ, ಮಾಲೀಕ ಮತ್ತು ಮಾಲೀಕನ ಮಗಳ ಮೇಲೆ ಹಲ್ಲೆ ಮಾಡಿದ ಘಟನೆ ಪಟ್ಟೇಗಾರಪಾಳ್ಯದ ಮುನೇಶ್ವರ ನಗರದಲ್ಲಿ ನಡೆದಿದೆ.
ಶಾಲಿನಿ ಅವರ ಮನೆಯಲ್ಲಿ ನಾಯಿ ಸಾಕುತ್ತಿದ್ದಾರೆ. ಮಾರ್ಚ್ 7 ರಂದು ಪಕ್ಕದ ಮನೆಯ ಶಂಕರ್ ರಾತ್ರಿ 10-30ಕ್ಕೆ ಸ್ನೇಹಿತರ ಜೊತೆ ಬಂದಿದ್ದರು. ಅಪರಿಚಿತರು ಬಂದಿದ್ದಕ್ಕೆ ನಾಯಿ ಬೊಗಳಿದೆ. ಇಷ್ಟಕ್ಕೇ ಶಂಕರ್ ಅಂಡ್ ಗ್ಯಾಂಗ್ ನಾಯಿ ಮೇಲೆ ಅಟ್ಯಾಕ್ ಮಾಡಿದೆ. ನಾಯಿಯ ಮಾಲೀಕರು ಮೇಲೂ ಹಲ್ಲೆ ನಡೆಸಿದ ಗ್ಯಾಂಗ್ ಅಪ್ಪನ ರಕ್ಷಣೆಗೆ ಬಂದ ಕಾಲೇಜು ವಿದ್ಯಾರ್ಥಿನಿ ಶಾಲಿನಿಯನ್ನು ಕೂಡ ಗ್ಯಾಂಗ್ ಎಳೆದಾಡಿದೆ.
ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷರಿಗೆ ಯುವತಿ ದೂರು ನೀಡಿದ್ದು, ಸದ್ಯ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.