ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೇಟ್ ನಿರಾಕರಿಸಿರುವ ಹಿನ್ನಲೆಯಲ್ಲಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು ಬೆಳಗ್ಗೆ ಪಕ್ಷದ ವರಿಷ್ಠರಿಂದ ಫೋನ್ ಬಂದಿತ್ತು. ನೀವು ಸೀನಿಯರ್ ಬೇರೆಯವರಿಗೆ ಅವಕಾಶ ನೀಡಿ ಎಂದು ಹೇಳಿದ್ದಾರೆ. ನಾನು ಮೂವತ್ತು ವರ್ಷದಿಂದ ಪಕ್ಷ ಕಟ್ಟಿ ಬೆಳೆಸಿದ್ದೇನೆ. ನೂರಾರು ಜನರಿಗೆ ಟಿಕೆಟ್ ಕೊಟ್ಟಿದ್ದೇನೆ. ನನಗೆ ಟಿಕೇಟ್ ನಿರಾಕರಿಸಿರುವುದಕ್ಕೆ ಕಾರಣ ತಿಳಿಸುವಂತೆ ಕೇಳಿದ್ದೇನೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಮೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ ಪಕ್ಷನಿಷ್ಠೆ ಉಳಿಸಿಕೊಂಡಿದ್ದೇನೆ. ಲಾಯಲ್ ಆಗಿ ಕೆಲಸ ಮಾಡಿದವರಿಗೆ ಗೌರವ ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.