ವಿಧಾನಸೌಧದಲ್ಲಿ ನಮಾಜ್‌ಗೆ ಕೊಠಡಿ ನೀಡಿ: ಬಿ.ಎಂ. ಫಾರೂಖ್ ಮನವಿ

ಬೆಂಗಳೂರು: ವಿಧಾನಸೌಧದಲ್ಲಿ ನಮಾಜ್ ಮಾಡಲು ಒಂದು ಕೊಠಡಿಯನ್ನು ನೀಡಬೇಕು ಎಂದು ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಬಿ.ಎಂ. ಫಾರೂಖ್ ಮನವಿ ಮಾಡಿದ್ದಾರೆ.

ವಿಧಾನಸೌಧದ ಪಾರ್ಕಿಂಗ್ ಪ್ರದೇಶದಲ್ಲಿ ಶಾಸಕರ ಕಾರುಗಳಿಗೇ ಸ್ಥಳಗಳಿಲ್ಲದಂತೆ ಕಾರುಗಳು ನಿಂತಿರುತ್ತವೆ ಎಂಬ ಕುರಿತು ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಪ್ರಸ್ತಾಪಿಸಿದ ಸಮಯದಲ್ಲಿ ಈ ಮಾತು ಹೇಳಿದರು.

ವಿಧಾನಸೌಧದ ಒಳಗಡೆ ಬರಲು ಆಗುತ್ತಿಲ್ಲ. ಪಾರ್ಕಿಂಗ್ ಮಾಡಲು ವ್ಯವಸ್ಥೆ ಇಲ್ಲ. ವಾಹನಗಳು ತುಂಬಿವೆ, ಸದಸ್ಯರ ರಕ್ಷಣೆಗೆ ಸಭಾಪತಿ ಬರಬೇಕು ಎಂದರು. ಇದಕ್ಕೆ ಉತ್ತರಿಸಿದ ಕಾನೂನು ಸಚಿವ ಎಚ್.ಕೆ ಪಾಟೀಲ್‌, ಸಭಾಪತಿ ಅವರ ಮುಂದಾಳತ್ವದಲ್ಲಿ ಸಭೆ ಮಾಡಿ ಪೋಲಿಸ್‌ ಅಧಿಕಾರಿಗಳನ್ನು ಕರೆಯೋಣ. ಸಭೆಯಲ್ಲಿ ಪಾರ್ಕಿಂಗ್, ಕ್ಯಾಂಟೀನ್ ಸೇರಿದಂತೆ ಸದಸ್ಯರ ಸಮಸ್ಯೆಗಳ ಬಗ್ಗೆ ಚರ್ಚಿಸೋಣ ಎಂದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ಜೆಡಿಎಸ್ ಸದಸ್ಯ ಬಿ. ಎಂ.ಫಾರೂಕ್‌, ನಮಾಜ್‌ ಮಾಡಲು ಒಂದು ಕೊಠಡಿ ಅವಕಾಶ ಮಾಡಿಕೊಡಿ ಎಂದು ಪ್ರಸ್ತಾಪಿಸಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್‌ನ ಶರವಣ ಮಾತನಾಡಿ, ಕ್ಯುಆರ್ ಕೋಡ್ ಅಥವಾ ಇನ್ನಾವುದಾದರೂ ತಂತ್ರಜ್ಞಾನ ಬಳಸಿ ನಕಲಿ ಪಾಸ್‌ ತಡೆಯಬೇಕು ಎಂದರು. ಇದಕ್ಕೆ ಉತ್ತರಿಸಿದ ಎಚ್.ಕೆ. ಪಾಟೀಲ್, ನಕಲಿ ಪಾಸ್ ಗಳು ಹೆಚ್ಚಾಗಿವೆ. ನಮ್ಮ ನಿಮ್ಮೆಲ್ಲರ ಹೆಸರಿನಲ್ಲಿ ದಲ್ಲಾಳಿಗಳು ವಿಧಾನಸೌಧದ ಒಳಗೆ ಬರುತ್ತಿದ್ದಾರೆ . ನಮಗೂ ಜನರಿಗೂ ಅನುಕೂಲ ಮಾಡುವಂತೆ ಸಭೆ ತೀರ್ಮಾನ ಮಾಡಲಾಗುತ್ತದೆ ಎಂದರು.

ಯಾವ ದಳ್ಳಾಳಿಗಳು, ವರ್ಗಾವಣೆ ದಳ್ಳಾಳಿಗಳಾ, ಭೂ ದಳ್ಳಾಳಿಗಳಾ ಎಂದು ಬಿಜೆಪಿ ಸದಸ್ಯ ಮುನಿರಾಜು ಪ್ರಶ್ನಿಸಿದರು. ಪೊಲಿಟಿಕಲ್ ಪಾವರ್ಸ್ ದಳ್ಳಾಳಿಗಳು ಸೇರಿದಂತೆ ಬೇರೆಯವರು ಇದ್ದಾರೆ. ಹೆಸರು ಹೇಳು ಎಂದರೆ ಹೇಳುತ್ತೇನೆ. ದಳ್ಳಾಳಿಗಳು, ಮುಟ್ಟಾಳರನ್ನು ದೂರು ಇಡುವ ಕೆಲಸ ಆಗಬೇಕಿದೆ ಎಂದರು.

ಈ ಕುರಿತು ಸಭಾಪತಿ ಮುಂದಾಳತ್ವದಲ್ಲಿ ಸಭೆ ಮಾಡೋಣ ಎಂದು ಕಾನೂನು ಸಚಿವರು ಹೇಳಿದ್ದಾರೆ. ಹಾಗಾಗಿ ಸದಸ್ಯರೆಲ್ಲರೂ ಚರ್ಚೆ ನಿಲ್ಲಿಸೋಣ ಎಂದು ಉಪಸಭಾಪತಿ ಪ್ರಾಣೇಶ್‌ ತಿಳಿಸಿದರು

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

5 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

6 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

6 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

6 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

6 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago