ಬೆಂಗಳೂರು: ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿದ್ದಾರೆ. ನಮ್ಮ ಸರ್ಕಾರ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ.
ರೈತರು, ಕಾರ್ಮಿಕರು, ಬಡವರು ಹಾಗೂ ಅವಕಾಶ ವಂಚಿತರ ಕಲ್ಯಾಣಕ್ಕಾಗಿ ಸರ್ಕಾರ ಶ್ರಮಿಸುತ್ತಿದೆ. ಅಭಿವೃದ್ಧಿ ಪಥದಲ್ಲಿ ಮುಂಚೂಣಿಯಲ್ಲಿ ಕರ್ನಾಟಕ ಸಾಗುತ್ತಿದೆ. ಎಲ್ಲರನ್ನು ಒಳಗೊಂಡ ಮಾದರಿ ಸರ್ಕಾರ ಇದಾಗಿದೆ ಎಂದಿದ್ದಾರೆ.
ರೈತ ಮತ್ತು ಅವರ ಕುಟುಂಬ ಸಮೃದ್ಧವಾಗಿದ್ದರೆ ರಾಜ್ಯವು ಸುಖ ಶಾಂತಿಯಿಂದ ಇರುತ್ತದೆ. ಅವರ ಕುಟುಂಬವನ್ನು ಸದೃಢಗೊಳಿಸಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಪ್ರಧಾನಿ ಮೋದಿ ಅವರು ಹಾಕಿಕೊಟ್ಟ ಅಭಿವೃದ್ಧಿ ಪಥದಲ್ಲಿ ಚಲಿಸುತ್ತಿದ್ದೇವೆ ಎಂದಿದ್ದಾರೆ.
ಇಂದು ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಾದ @TCGEHLOT ಅವರು ಭಾಷಣವನ್ನು ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಶ್ರೀ @BSBommai, ವಿಧಾನಸಭಾ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಧ್ಯಕ್ಷರಾದ ಶ್ರೀ ಬಸವರಾಜ ಹೊರಟ್ಟಿ ಸೇರಿದಂತೆ ಇತರ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. pic.twitter.com/IYV2PMNqHJ
— CM of Karnataka (@CMofKarnataka) February 10, 2023