ಬೆಂಗಳೂರು: 5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುತ್ತೇವೆ, ರದ್ದು ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆ ರದ್ದಾಗುತ್ತದೆ ಎಂಬ ಶಾಸಕ ಬಾಲಕೃಷ್ಣ ಅವರ ವಿವಾದಿತ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಲೋಕಸಭಾ ಚುನಾವಣೆ ಆದ ಮೇಲೆ ಗ್ಯಾರಂಟಿ ಯೋಜನೆ ಕೊಡಲ್ಲ ಎಂಬುದನ್ನು ಬಾಲಕೃಷ್ಣ ಹೇಳಿರೋದಲ್ಲ. ಬಿಜೆಪಿಯವರು ಹಾಗೆ ಹೇಳಿದ್ದಾರೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆ ಕರ್ನಾಟಕದಲ್ಲಿ ರದ್ದು ಮಾಡೋದಿಲ್ಲ. ರಾಜ್ಯದಲ್ಲಿ 5 ವರ್ಷ ಗ್ಯಾರಂಟಿ ಯೋಜನೆ ಇರಲಿದೆ ಎಂದಿದ್ದಾರೆ.