ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಸಮಾರಂಭದಲ್ಲಿ ಗೌರವಾನ್ವಿತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಬೆಂಗಳೂರು ವಿಶ್ವವಿದ್ಯಾಲಯ ಗೌರವಾನ್ವಿತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೌಗೂ ಹಾಗೂ ವಿಜ್ಞಾನಿ ಮತ್ತು ಇಸ್ರೋ ಅಧ್ಯಕ್ಷರಾದ ಶ್ರೀ ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಘಟಿಕೋತ್ಸವವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಶಿಕ್ಷಣ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅತ್ಯುತ್ತಮವಾದ ಕೆಲಸಗಳನ್ನು ಮಾಡಿ ದೇಶದ ಪ್ರಗತಿಗೆ ಗಣನೀಯ ಕೊಡುಗೆ ನೀಡಿದ ಭಾರತದ ಮಾಜಿ ಪ್ರಧಾನಿ ಶ್ರೀ ದೇವೇಗೌಡರನ್ನು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪದವಿಯೊಂದಿಗೆ ಗೌರವಿಸಿರುವುದು ಸಂತೋಷದ ವಿಷಯ. ವಿಜ್ಞಾನಿ ಮತ್ತು ಇಸ್ರೋ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸೋಮನಾಥ್ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ. ಕಾರಣಾಂತರಗಳಿಂದ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ಸಮಾಜಕ್ಕಾಗಿ ಈ ಇಬ್ಬರು ಮಹನೀಯರ ಕೊಡುಗೆ ನಿರಂತರವಾಗಿರಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.
ಕರ್ನಾಟಕ ರಾಜ್ಯವು ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದ ಪ್ರಮುಖ ರಾಜ್ಯವಾಗಿದೆ. ಇಲ್ಲಿ ಅನೇಕ ವಿಶ್ವ ದರ್ಜೆಯ ಸಂಶೋಧನಾ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳಿವೆ, ಅದರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದು. ಈ ವಿಶ್ವವಿದ್ಯಾನಿಲಯವು ಭಾರತದ ಆಧುನಿಕತೆ, ಇತಿಹಾಸ, ಸಂಸ್ಕೃತಿ ಮತ್ತು ನಾಗರಿಕತೆಯೊಂದಿಗೆ ಸಂಪರ್ಕ ಹೊಂದಿದೆ. ಮಾನವಿಕ, ಸಮಾಜ ವಿಜ್ಞಾನ, ಕಾನೂನು, ವಾಣಿಜ್ಯ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅನನ್ಯ ಮತ್ತು ಮಹತ್ವದ ಕೊಡುಗೆಗಳನ್ನು ನೀಡುವ ಮೂಲಕ ಇದು ತನ್ನ ಧ್ಯೇಯವಾಕ್ಯ – “ಜ್ಞಾನ ವಿಜ್ಞಾನ ಸಾಹಿತ್ಯಂ” ಅನ್ನು ಅರ್ಥಪೂರ್ಣಗೊಳಿಸುತ್ತಿದೆ. ಬೆಂಗಳೂರು ವಿಶ್ವವಿದ್ಯಾಲಯವು ದೇಶದ ಮತ್ತು ರಾಜ್ಯದ ಪ್ರಮುಖ ವಿಶ್ವವಿದ್ಯಾಲಯವಾಗಿದೆ. 2023 ರಲ್ಲಿ NAAC ನಿಂದ A+ + ಗ್ರೇಡ್ ಅನ್ನು ನೀಡಲಾಗಿದೆ. ಇದು ವಿಶ್ವವಿದ್ಯಾಲಯದ ದೊಡ್ಡ ಸಾಧನೆಯಾಗಿದೆ ಎಂದು ಶ್ಲಾಘಿಸಿದರು.
ವಿದ್ಯಾರ್ಥಿಗಳು ನವ ಭಾರತ ಶ್ರೇಷ್ಠ ಭಾರತ” ಮತ್ತು “ಸ್ವಾವಲಂಬಿ ಭಾರತ” ನಿರ್ಮಾಣದಲ್ಲಿ ಭಾಗವಹಿಸಬೇಕು. ಯಶಸ್ವಿ ಉದ್ಯಮಿಯಾಗುವ ಕನಸನ್ನು ಪಾಲಿಸಬೇಕು ಮತ್ತು ಉದ್ಯೋಗಕ್ಕಾಗಿ ಇತರರ ಕಡೆಗೆ ನೋಡಬೇಡಿ, ಆದರೆ ನೀವೇ ಇತರರಿಗೆ ಉದ್ಯೋಗದಾತರಾಗಬೇಕೆಂದು ಎಂದು ಕರೆ ನೀಡಿದರು.
ಶಿಕ್ಷಣವು ನಮಗೆ ತಾಂತ್ರಿಕ ಮತ್ತು ಉನ್ನತ ಕೌಶಲದ ಜ್ಞಾನವನ್ನು ಹಾಗೂ ವಿಚಾರಗಳನ್ನು ವ್ಯಕ್ತಪಡಿಸುವ ಸಾಮರ್ಥ್ಯವನ್ನು ಒದಗಿಸುತ್ತದೆ. ಯುವಕರು ನಮ್ಮ ದೇಶದ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಯ ಪ್ರಮುಖ ಭಾಗವಾಗಿದ್ದಾರೆ. ಯುವಕರನ್ನು ನುರಿತರನ್ನಾಗಿ ಮಾಡುವ ಮೂಲಕ ಮಾತ್ರ, ನಾವು ವೋಕಲ್ ಫಾರ್ ಲೋಕಲ್ ದಿಕ್ಕಿನಲ್ಲಿ ಮುನ್ನಡೆಯಬಹುದು. ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್ಅಪ್ ಮತ್ತು ಸ್ಟ್ಯಾಂಡ್ ಅಪ್, ವೆಂಚರ್ ಕ್ಯಾಪಿಟಲ್ ಫಂಡ್ ಯೋಜನೆಗಳ ಬಳಕೆಯಿಂದ ಶ್ರೇಷ್ಠ ಭಾರತ, ನವ ಭಾರತ ಮತ್ತು ಸ್ವಾವಲಂಬಿ ಭಾರತವನ್ನು ರಚಿಸಬಹುದು ಮತ್ತು ಇವುಗಳ ಮೂಲಕ ಉದ್ಯೋಗಾವಕಾಶಗಳನ್ನು ಒದಗಿಸಬಹುದು ಎಂದು ತಿಳಿಸಿದರು.
ಸ್ವಾತಂತ್ರ್ಯದ 75 ವರ್ಷಗಳಲ್ಲಿ, ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ ಮತ್ತು ದೇಶದ ಆರ್ಥಿಕತೆಯನ್ನು ಬಲಪಡಿಸಿದೆ. ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ದೇಶವನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಶ್ವದ 3 ನೇ ಅತಿದೊಡ್ಡ ಆರ್ಥಿಕತೆಯನ್ನು ಮಾಡಲು ನಿರ್ಧರಿಸಲಾಗಿದೆ. ತಂತ್ರ್ಯದ ಶತಮಾನೋತ್ಸವವನ್ನು ತಲುಪಲು, ಮುಂದಿನ 24 ವರ್ಷಗಳು ನಮ್ಮ ದೇಶವನ್ನು ವಿಶ್ವದ ಅತ್ಯುತ್ತಮ ದೇಶಗಳ ವರ್ಗಕ್ಕೆ ತರುವ ಕರ್ತವ್ಯದ ಸುವರ್ಣ ಅವಧಿಯಾಗಿದೆ. ಈ ಕರ್ತವ್ಯದ ಅವಧಿಯನ್ನು ಅವಕಾಶವನ್ನಾಗಿ ಪರಿವರ್ತಿಸಲು ನಾವು ಪಾಲುದಾರರಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗೌರವಾನ್ವಿತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಉನ್ನತ ಶಿಕ್ಷಣ ಸಚಿವರಾದ ಶ್ರೀ ಡಾ.ಎಂ ಸಿ ಸುಧಾಕರ್, ಝರೋಧ ಸಂಸ್ಥೆಯ ಸಹ ಸಂಸ್ಥಾಪಕರಾದ ನಿಖಿಲ್ ಕಾಮತ್ , ಕುಲಪತಿ ಡಾ.ಜಯಕರ್ ಎಸ್ ಎಂ ಮುಂತಾದ ಗಣ್ಯರು ಉಪಸ್ಥಿತರಿದ್ದರು.