ಬೆಂಗಳೂರು: ಗೌರಿ ಗಣೇಶ ಚತುರ್ಥಿ ಆಚರಣೆಗೆ ಮುನ್ನವೇ ರಾಜ್ಯ ಆರೋಗ್ಯ ಇಲಾಖೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ.
ಸೋಮವಾರ ಸಂಜೆ ರಾಜ್ಯ ಆರೋಗ್ಯ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ.
ಕಳೆದ ಕೆಲವು ವಾರಗಳಲ್ಲಿ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಗೌರಿ ಗಣೇಶ, ಮಲೆಯಾಳ ಅಮಾವಾಸ್ಯೆ ಸೇರಿದಂತೆ ಶ್ರಾವಣ ಮಾಸದಲ್ಲಿ ಸಾಲುಗಟ್ಟಿ ಬರುವ ಹಬ್ಬ ಹರಿದಿನಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. 5 ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ರಾಜ್ಯ ಸರ್ಕಾರದ ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.