ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಉಂಟಾದ ಪರಿಣಾಮ ನಾಳೆ (ಮೇ 10ರಂದು) ಚಂಡಮಾರುತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಎಚ್ಚರಿಸಿದ್ದಾರೆ. ಗಾಳಿದಿಕ್ಕಿನಲ್ಲಿ ಸಮುದ್ರಮಟ್ಟದಿಂದ 1.5 ಕಿಲೋ ಮೀಟರ್ನಷ್ಟು ಸುಳಿ ಉಂಟಾಗಿದೆ.
ಜೊತೆಗೆ ತೀವ್ರವಾದ ವಾಯುಭಾರ ಕುಸಿತವಾಗಿದೆ. ಇದರ ಪ್ರಭಾವದಿಂದಾಗಿ ನಾಳೆ ಚಂಡಮಾರುವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ , ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮೂರು ದಿನ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.