News Karnataka Kannada
Sunday, April 28 2024
ಬೆಂಗಳೂರು ನಗರ

ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆ: ಮನೆ ಕುಸಿದು ಕಾರುಗಳಿಗೆ ಹಾನಿ

Heavy rain warning for five districts
Photo Credit : IANS

ಬೆಂಗಳೂರು, ಮೇ.9: ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ವಿವಿಧ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ಸಾರ್ವಜನಿಕ ಸಭೆಗಳಿಗೆ ಅಡ್ಡಿಯುಂಟಾಗಿದೆ.

ಮಳೆಯಿಂದಾಗಿ ಮನೆ ಕುಸಿದಿದೆ ಮತ್ತು ನಗರದಲ್ಲಿ ಅನೇಕ ಕಾರುಗಳು ಹಾನಿಗೊಳಗಾಗಿವೆ. ಬೆಂಗಳೂರು ದಕ್ಷಿಣ ವಲಯದ ಹೊರ ವರ್ತುಲ ರಸ್ತೆಯ ವೀರಭದ್ರೇಶ್ವರ ನಗರದಲ್ಲಿ ಮನೆ ಕುಸಿದ ಘಟನೆ ವರದಿಯಾಗಿದೆ.

ಗೋಪಾಲ್ ಎಂಬುವವರಿಗೆ ಸೇರಿದ ಮನೆ ಕುಸಿದಿದ್ದು, ಅದರಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ನಾಶವಾಗಿವೆ. ಆದಾಗ್ಯೂ, ಘಟನೆ ನಡೆದಾಗ ಮನೆಯಲ್ಲಿ ಯಾರೂ ಇಲ್ಲದ ಕಾರಣ ದೊಡ್ಡ ದುರಂತ  ತಪ್ಪಿ ದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಾರ್ಟ್ಮೆಂಟ್ ಗೋಡೆ ಕೂಡ ಕುಸಿದಿದ್ದು, ಅಲ್ಲಿ ನಿಲ್ಲಿಸಿದ್ದ ನಾಲ್ಕು ಕಾರುಗಳಿಗೆ ಹಾನಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಇದಲ್ಲದೆ, ಭಾರಿ ಮಳೆಯಿಂದಾಗಿ ಹೊಸಕೆರೆಹಳ್ಳಿಯ ಪು‌ಷ್ಪಗಿರಿ  ನಗರದಲ್ಲಿ ಮನೆಗಳು ಜಲಾವೃತವಾಗಿವೆ.

ದತ್ತಾತ್ರೇಯನಗರ, ಗಿರಿನಗರದ 12ನೇ ಮುಖ್ಯರಸ್ತೆ ಹಾಗೂ ಇತರ ಬಡಾವಣೆಗಳ ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳನ್ನು ಜನರು ಖಂಡಿಸಿದ್ದಾರೆ.
ಬಾಪೂಜಿನಗರ, ಬ್ಯಾಂಕ್ ಕಾಲೋನಿ, ಶಾಂತಿನಗರ, ರಿಚ್ಮಂಡ್ ರಸ್ತೆ ಸೇರಿದಂತೆ ಹಲವೆಡೆ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಮೇ 13 ರವರೆಗೆ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು