ಸಚಿವ ಸ್ಥಾನ ಪಡೆಯುವ ಅದೃಷ್ಟಶಾಲಿಗಳು ಯಾರು: ಇಲ್ಲಿದೆ ನೋಡಿ ಪಟ್ಟಿ

ಬೆಂಗಳೂರು: ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆಗೆ ಕೆಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಈ ವೇಳೆ 28 ಮಂದಿ ಸಚಿವರಾಗಿ ಪ್ರಮಾಣವಚನ ಸ್ವಿಕರಿಸುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಗೆ ಮೂರು ಸಚಿವ ಸ್ಥಾನಗಳನ್ನು ನೀಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಪ್ರಮುಖವಾಗಿ ಆ ಮೂವರು ಯಾರು ಅಂದರೆ ಬಿಜೆಪಿ ತೊರೆದು ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದಿರುವ ಲಕ್ಷ್ಮಣ ಸವದಿ, ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸತತ ಎರಡನೇ ಬಾರಿ ಗೆದ್ದಿರುವ ಲಕ್ಷ್ಮಿ ಹೆಬ್ಬಾಳ್ಕರ್ ಹೆಬ್ಬಾಳ್ಕರ್​ ಅವರಿಗೆ ಮಹಿಳಾ ಕೋಟಾದಲ್ಲಿ ಸಚಿವ ಸ್ಥಾನ ಲಭಿಸುವ ಸಾಧ್ಯತೆಗಳು ಹೆಚ್ಚಿವೆ. ಇನ್ನು ಕಾಂಗ್ರೆಸ್​ ಹಿರಿಯ ನಾಯಕ, ಕೆಪಿಸಿಸಿ ಕಾರ್ಯಧ್ಯಕ್ಷ ಬೆಳಗಾವಿಯಲ್ಲಿ ಹಿಡಿತ ಸಾಧಿಸಿರುವ ಸತೀಶ್ ಜಾರಕಿಹೊಳಿ ಅವರಿಗೂ ಪ್ರಮುಖ ಖಾತೆ ಸಿಗುವುದು ಖಚಿತವಾಗಿದೆ.

ಇನ್ನು ಬೆಂಗಳೂರ ನಗರ ಜಿಲ್ಲೆಯಲ್ಲಿ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಹ್ಯಾರಿಸ್, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್​ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿವೆ. ಇನ್ನುಳಿದಂತೆ ಆರ್.ಬಿ.ತಿಮ್ಮಾಪುರ್, ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್, ಈಶ್ವರ್ ಖಂಡ್ರೆ. ಹೆಚ್.ಕೆ.ಪಾಟೀಲ್, ಭೀಮಣ್ಣ ನಾಯಕ, ಎಸ್​ಎಸ್​ ಮಲ್ಲಿಕಾರ್ಜುನ, ರುದ್ರಪ್ಪ ಲಮಾಣಿ , ನಾಗೇಂದ್ರ, ಮಧು ಬಂಗಾರಪ್ಪ, ಯು.ಟಿ. ಖಾದರ್, ಬಿ.ಕೆ. ಹರಿಪ್ರಸಾದ್, ಸಲೀಂ ಅಹಮದ್ ಸೇರಿ ಪ್ರಮುಖರ ಹಸರು ಪಟ್ಟಿಯಲ್ಲಿದೆ ಎಂದು ಹೇಳಲಾಗಿದೆ

Gayathri SG

Recent Posts

ಅಹಮದಾಬಾದ್‌ನಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…

14 mins ago

ಆರ್ಭಟಿಸಿ ಬಂದ ಮಳೆಗೆ ಸಿಡಿಲು ಬಡಿದು ಆರು ಮಂದಿ ಬಲಿ

ನೆನ್ನ ದೇಶದ ಹಲವೆಡೆ ಧಾರಕಾರ ವಾಗಿ ಮಳೆ ಸುರಿದಿದೆ. ಬಹಳ ದಿನಗಳ ನಂತರ ವರುಣ ಭೂಮಿಗೆ ತಂಪೆರದಿದ್ದಾನೆ. ಆದರೆ ಬಂಗಾಳದಲ್ಲಿ…

39 mins ago

ಮಕ್ಕಳಾಗದ ದಂಪತಿಗೆ ಗುಡ್ ನ್ಯೂಸ್ : ಐವಿಎಫ್‌ ಈಗ ಸರ್ಕಾರಿ ಆಸ್ಪತ್ರೆಯಲ್ಲೂ ಲಭ್ಯ

ಹಲವು ದಂಪತಿಗಳಿಗೆ ಮಕ್ಕಳ್ಳಿಲ್ಲದ ಕೊರತೆ ಕಾಡುತ್ತಿವೆ. ಕೆಲವು ದಂಪತಿಗಳು ಹರಕೆ ಹೊರುತ್ತಾರೆ ಇನ್ನೂ ಕೆಲವರು ಐವಿಎಫ್ ನಂತಹ ಚಿಕಿತ್ಸೆ ಮೊರೆ…

1 hour ago

ದೇಶದ 93 ಲೋಕಸಭಾ ಕ್ಷೇತ್ರಗಳಲ್ಲಿ 3ನೇ ಹಂತದ ಮತದಾನ ಶುರು

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ…

2 hours ago

ಬೆಳಗ್ಗೆ ಖಾಲಿ ಹೊಟ್ಟೆಗೆ ಹಣ್ಣಿನ ಜ್ಯೂಸ್ ಕುಡಿಯಬಾರದು ಯಾಕೆ?

ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…

2 hours ago

ಇಂದಿನ ರಾಶಿ ಫಲ : ಈ ರಾಶಿಯವರಿಗೆ ದಿಢೀರ್ ಪ್ರಯಾಣ ಸಾಧ್ಯತೆ

ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…

2 hours ago