ಬೆಂಗಳೂರು: ಹೈಕಮಾಂಡ್ ಹೇಳಿದ್ರೆ ಮಾತ್ರ ನಾವು ರಾಮ ಮಂದಿರಕ್ಕೆ ಹೋಗುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಜನವರಿ 22 ನಂತರ ರಾಮ ಮಂದಿರಕ್ಕೆ ಹೋಗುತ್ತೇನೆ ಎಂದು ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದ ಹಾಗೆ ಹೇಳಿಕೆ ನೀಡಿದ ಪರಮೇಶ್ವರ, ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ. ಸರ್ಕಾರದ ಹಂತದಲ್ಲಿ ಈ ಬಗ್ಗೆ ಚರ್ಚೆ ನಡೆದಿಲ್ಲ. ಹೈಕಮಾಂಡ್ ಈಗಾಗಲೇ ರಾಮಮಂದಿರ ಕಾರ್ಯಕ್ರಮಕ್ಕೆ ಹೋಗಬಾರದು ಎಂಬ ನಿಲುವು ತೆಗೆದುಕೊಂಡಿದೆ. ಒಂದು ವೇಳೆ ಜನವರಿ 22 ನಂತರ ಹೋಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಿದರೆ ನಾವು ಹೋಗುತ್ತೇವೆ ಎಂದು ಹೇಳಿದರು.
ಎಲ್ಲವನ್ನೂ ನಮ್ಮ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದೇವೆ. ನಮ್ಮದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೋ ಅದರಂತೆ ನಡೆಯಬೇಕು. ಅವರು ಹೋಗುವುದು ಬೇಡ ಎಂದು ಹೇಳಿದಾಗ ನಾವು ಅದರ ವಿರುದ್ದ ನಿಲುವು ತೆಗೆದುಕೊಳ್ಳಲು ಆಗುವುದಿಲ್ಲ ಎಂದಿದ್ದಾರೆ.