ಬೆಂಗಳೂರು: ಶನಿವಾರ ರಾತ್ರಿ 10.30ರ ನಂತರ ಹಿಂದುತ್ವವಾದಿಗಳು ನಗರದಲ್ಲಿ ಕಾಂಗ್ರೆಸ್ ಸಮಾವೇಶದ ಸ್ಥಳಗಳಲ್ಲಿ ಟಿಪ್ಪು ಸುಲ್ತಾನ್ ಅವರ ಫ್ಲೆಕ್ಸ್ಗಳನ್ನು ಹರಿದು ಹಾಕಿದ್ದಾರೆ.
ಕೆಆರ್ ವೃತ್ತ ಮತ್ತು ಹಡ್ಸನ್ ವೃತ್ತದಲ್ಲಿ ಘಟನೆ ವರದಿಯಾಗಿದೆ. ಈ ಸಂಬಂಧ ಎರಡು ದೂರುಗಳು ಬಂದಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೂಲಗಳ ಪ್ರಕಾರ, ಶಿವಮೊಗ್ಗ ಮಾಲ್ನಲ್ಲಿ ವೀರ್ ಸಾವರ್ಕರ್ ಫೋಟೋಗಳನ್ನು ವಿರೋಧಿಸಿದ ವಿರುದ್ಧ ಸೇಡಿನ ಕ್ರಮವಾಗಿ 8 ರಿಂದ 10 ಯುವಕರ ಗುಂಪು ಫ್ಲೆಕ್ಸ್ಗಳನ್ನು ಹರಿದು ಹಾಕಿದೆ.
ಗುಂಪು ತಮ್ಮ ಕೃತ್ಯವನ್ನು ಲೈವ್ ಸ್ಟ್ರೀಮ್ ಮಾಡಿದೆ. ಇದೀಗ ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಹಲಸೂರು ಗೇಟ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕೃತ್ಯವನ್ನು ಖಂಡಿಸಿದ್ದಾರೆ. ಪೊಲೀಸರು ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.