ಬಿಜೆಪಿ ಸೇರುವುದನ್ನು ಬಿಟ್ಟು ಜೈಲು ಆಯ್ಕೆ ಮಾಡಿಕೊಂಡೆ: ಭಾವುಕರಾದ ಡಿ.ಕೆ. ಶಿವಕುಮಾರ್‌

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಭಾವುಕರಾಗಿದ್ದಾರೆ. ಅಖಂಡ ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಛಳ ಬಹುಮತ ನೀಡಿದ್ದಾರೆ ಎಂದು ಭಾವುಕರಾಗಿದ್ದಾರೆ.

ನನ್ನ ಪಕ್ಷದ ಕಾರ್ಯಕರ್ತರು, ನಾಯಕರ ಒಗ್ಗಟ್ಟಿನ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ. ನಾನು ಪಕ್ಷದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಹೇಳಿದ್ದೆ, ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಯೂಡಿ ಕೆಲಸ ಮಾಡುವುದು ಯಶಸ್ಸು ಎಂದು. ಅದೇ ರೀತಿ ನಮ್ಮ ನಾಯಕರು ಹಾಗೂ ಕಾರ್ಯಕರ್ತರ ಒಗ್ಗಟ್ಟಿನ ಪರಿಶ್ರಮದಿಂದ ಪಕ್ಷಕ್ಕೆ ಈ ಯಶಸ್ಸು ಸಿಕ್ಕಿದೆ.

ಬಿಜೆಪಿ ಸೇರುವುದನ್ನು ಬಿಟ್ಟು ಜೈಲಿಗೆ ಹೋಗುವುದನ್ನು ಆಯ್ಕೆ ಮಾಡಿಕೊಂಡೆ: ನಾನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊಟ್ಟ ಮಾತಿನಂತೆ ನಾನು ಪಕ್ಷವನ್ನು ಗೆಲುವಿನ ದಡ ಸೇರಿಸಿದ್ದೇನೆ. ನನ್ನ ಮೇಲೆ ಬಿಜೆಪಿ ಷಡ್ಯಂತ್ರ ರೂಪಿಸಿ ಬಿಜೆಪಿ ಸೇರಬೇಕು ಅಥವಾ ಜೈಲಿಗೆ ಹೋಗಬೇಕು ಎಂಬ ಆಯ್ಕೆ ಇಟ್ಟಾಗ ನಾನು ಜೈಲಿಗೆ ಹೋಗುವುದನ್ನು ಆರಿಸಿಕೊಂಡೆ. ಆಗ ಸೋನಿಯಾ ಗಾಂಧಿ ಅವರು ತಿಹಾರ್ ಜೈಲಿಗೆ ಬಂದು ನನ್ನನ್ನು ಭೇಟಿ ಮಾಡಿದ್ದರು. ಅವರು ನನ್ನ ಮೇಲೆ ಅಷ್ಟು ನಂಬಿಕೆ ಇಟ್ಟಿದ್ದರು.

ಇದು ಒಬ್ಬನಿಂದ ಬಂದಿರುವ ಯಶಸ್ಸಲ್ಲ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಸೇರಿದಂತೆ ಕಾಂಗ್ರೆಸ್ ಶಾಸಕರುಗಳು, ಎಐಸಿಸಿ ಪದಾಧಿಕಾರಿಗಳು, ಉಸ್ತುವಾರಿಗಳು, ರಾಜ್ಯದ ನಾಯಕರುಗಳು, ಪಕ್ಷದ ಪದಾಧಿಕಾರಿಗಳು, ಬೂತ್ ಮಟ್ಟದಲ್ಲಿ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಿರುವ ಎಲ್ಲಾ ಕಾರ್ಯಕರ್ತರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ನಾನು ಈಗ ಹೆಚ್ಚಾಗಿ ಏನು ಮಾತನಾಡುವುದಿಲ್ಲ. ಕಾರ್ಯಕರ್ತರು ಉತ್ಸಾಹದಿಂದ ಗಲಾಟೆ ಮಾಡುತ್ತಿದ್ದಾರೆ ಎಂದು ನನ್ನ ಚುನಾವಣಾ ಪ್ರಮಾಣಪತ್ರ ಪಡೆಯಲು ನಾನೇ ಹೋಗಬೇಕು ಎಂದು ರಾಮನಗರ ಜಿಲ್ಲಾಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ನಾನು ಅಲ್ಲಿಗೆ ಹೋಗುತ್ತಿದ್ದು, ಅಲ್ಲಿಂದ ಬಂದ ನಂತರ ನನ್ನ ದೇವಾಲಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾತನಾಡುತ್ತೇನೆ.

Umesha HS

Recent Posts

ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿದ್ದೆ ಸಿಎಂ: ಆರ್ ಅಶೋಕ್ ಆಕ್ರೋಶ

ಎಲ್ಲಾ ಎಪಿಸೋಡ್‌ಗಳನ್ನ ನೋಡಿದಾಗ ಸಿದ್ದರಾಮಯ್ಯನವರೇ ಪ್ರಜ್ವಲ್ ರೇವಣ್ಣ ನನ್ನು ವಿದೇಶಕ್ಕೆ ಕಳಿಸಿದಾರೆ ಅನಿಸುತ್ತೆ ಎಂದು ಬೀದರ್‌ನಲ್ಲಿ ವಿಪಕ್ಷ ನಾಯಕ ಆರ್…

6 mins ago

ಇಂದು ಮಧ್ಯಾಹ್ನದಿಂದಲೇ ಸಿಲಿಕಾನ್​ ಸಿಟಿಯಲ್ಲಿ ಭರ್ಜರಿ ಮಳೆ

ಬರೋಬ್ಬರಿ 6 ತಿಂಗಳ ಬಳಿಕ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಭರ್ಜರಿ ಮಳೆಯಾಗಿದೆ. ಇಂದು ಮಧ್ಯಾಹ್ನದಿಂದಲೇ ಬೆಂಗಳೂರಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ನಗರದ…

13 mins ago

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

ಶಾಲಾ ವಿದ್ಯಾರ್ಥಿಗಳಿಗೆ ವನ್ಯ ಸಂಪತ್ತು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಪ್ರಾಮುಖ್ಯತೆ ವಿಚಾರ ತಿಳಿಯಪಡಿಸಲು ಪ್ರಾರಂಭಿಸಿದ್ದ ಯುವಮಿತ್ರ ಕಾರ್ಯಕ್ರಮಕ್ಕೆ ಇಂಡಿಯಾ…

15 mins ago

ಕಾಂಗ್ರೆಸ್‌ನವರಿಗೆ ಇರುವುದೇ ಕೆಟ್ಟ ಬುದ್ಧಿ: ಭಗವಂತ್ ಖೂಬಾ

ಮೋದಿ ಕುರಿತ ಶಾಸಕ ರಾಜು ಕಾಗೆ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೀದರ್ ನಲ್ಲಿ ರಾಜು ಕಾಗೆ ವಿರುದ್ಧ ಭಗವಂತ್…

31 mins ago

ರಮೇಶ ಜಿಗಜಿಣಗಿ ಪರ ಮತಪ್ರಚಾರ, ಮಹಾಸಂಪರ್ಕ ಅಭಿಯಾನ

ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ವಾರ್ಡ್ ಸಂಖ್ಯೆ 29…

38 mins ago

ಬಿಜೆಪಿ ಪ್ರಚಾರದ ನಿಮಿತ್ತ ಅಫಜಲಪುರಕ್ಕೆ ಕರಾವಳಿ ಶಾಸಕ ಯಶ್ ಪಾಲ್ ಸುವರ್ಣ

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ್ ಅವರ ಪರವಾಗಿ ಕರಾವಳಿ ತೀರದ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ…

54 mins ago