ಬೆಂಗಳೂರು: ಕೆಆರ್ಪಿಪಿ ಪಕ್ಷದ ಮುಖ್ಯಸ್ಥ, ಗಣಿ ಧಣಿ ಅವರು ತಮ್ಮ ಪಕ್ಷದ ಘಟಕಗಳನ್ನು ವಿಸರ್ಜನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಾರೆ ಎಂದು ಸುದ್ದಿಯಾಗಿತ್ತು.
ಇದೀಗ ರೆಡ್ಡಿ ಅವರು ಈ ಸಂಬಂಧ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ.
ಕೆಆರ್ಪಿಪಿ ಪಕ್ಷದ ಸ್ಥಾಪಿಸಿದಾಗ ಯಾರೆಲ್ಲಾ ಎಷ್ಟೇ ಪ್ರಯತ್ನಿಸಿದರೂ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಕೊಳ್ಳಲಿಲ್ಲ. ಸ್ವತಂತ್ರವಾಗಿಯೇ ನಾನು ಮುಂದೆ ಹೋಗುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.