ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್ ಮರು ಮೈತ್ರಿ ಮಾಡಿಕೊಂಡಿವೆ. ಈ ನಿಟ್ಟಿನಲ್ಲಿ ಜೆಡಿಎಸ್ ರಾಜ್ಯ ಅಧ್ಯಕ್ಷ ಕೊನೆಗೂ ಸಿಎಂ ಇಬ್ರಾಹಿಂ ಮೌನಮುರಿದಿದ್ದಾರೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ವಿಚಾರವಾಗಿ ಅ. 16 ರಂದು ಕನ್ನಡ ಮಾಧ್ಯಮಗಳ ಜತೆ ಮಾತಾಡಬೇಕು ಎಂಬ ನಿರ್ಧಾರ ಮಾಡಿದ್ದೇನೆ ಅಲ್ಲಿಯವರೆಗೆ ಅವಕಾಶ ಕೊಡಿ, ಎಲ್ಲರ ಅಭಿಪ್ರಾಯ ಪಡೆದು ಕನ್ನಡ ಮಾಧ್ಯಮಗಳ ಜೊತೆ ಮಾತಾಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯದ ವಿಷಯಗಳ ಬಗ್ಗೆ ಈಗಾಗಲೇ ಹೆಚ್ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ ಎಂದಿರುವ ಅವರು, ನಾನೊಂದು ಪಕ್ಷದ ಅಧ್ಯಕ್ಷ ನೀವು ದೆಹಲಿಗೆ ಹೋದಿರಿ, ನನಗೆ ಒಂದು ಮಾತು ಹೇಳಿಲ್ಲ. ಏನು ಚರ್ಚೆ ಮಾಡಿದ್ದೀರಿ, ಈವರೆಗೆ ಮಾಹಿತಿ ಬಂದಿಲ್ಲ, ಮೈತ್ರಿ ಎಲ್ಲಿ ಆಗಿದೆ? ನಾನು ಪಕ್ಷದ ಅಧ್ಯಕ್ಷ, ಪಕ್ಷದಲ್ಲಿ ಎಲ್ಲಿ ಚರ್ಚೆ ಆಗಿದೆ? ಜನತಾದಳದ ಮೂಲ ಮತಗಳು ಈ ಬಾರಿ ಕಾಂಗ್ರೆಸ್ಗೆ ಹೋಗಿದೆ. ಅದನ್ನು ಒಪ್ಪಲು ತಯಾರಿಲ್ಲ, ಅದನ್ನು ಒಪ್ಪಿಕೊಳ್ಳಿ ಪಕ್ಷದಲ್ಲಿ ಚರ್ಚೆ ಆಗಿ ನಿರ್ಣಯ ಆದ ಮೇಲೆ ರಾಜ್ಯಾಧ್ಯಕ್ಷನಾಗಿ ನಾನು ಸಹಿ ಹಾಕಬೇಕು. ಕೋರ್ ಕಮಿಟಿ ಪ್ರವಾಸ ಶುರು ಮಾಡಿಲ್ಲ ಆಗಲೇ ಹೋಗಿ ಭೇಟಿ ಮಾಡಿ ಬಂದಿದ್ದಾರೆ ಎಂದು ಕುಮಾರಸ್ವಾಮಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಅ. 16ರ ಸಭೆಯ ಬಳಿಕ ಪಕ್ಷದ ವರಿಷ್ಠ ಹೆಚ್ ಡಿ ದೇವೇಗೌಡರು, ಕುಮಾರಸ್ವಾಮಿ ಜೊತೆ ಮಾತಾಡುತ್ತೇನೆ. ಶರದ್ ಪವಾರ್ ಸೇರಿದಂತೆ ಹಲವರು ಮತ್ತು ದೆಹಲಿಯಿಂದ ಕಾಂಗ್ರೆಸ್ ನಾಯಕರು ಮಾತಾಡಿದ್ದಾರೆ ಸಿದ್ದರಾಮಯ್ಯ ಜೊತೆ ಏನೂ ಮಾತುಕತೆ ಮಾಡಿಲ್ಲ ಎಂದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…