ಬೆಂಗಳೂರು: ಕಾಂಗ್ರೆಸ್ ಬಹುಮತ ಪಡೆದಿದ್ದರೂ ಸಿಎಂ ವಿಚಾರದ ಗೊಂದಲ ಮುಂದುವರಿದಿದೆ. ದೆಹಲಿ ತಲುಪಿರುವ ಡಿ.ಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಒನ್ ಟು ಒನ್ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ಡಿ.ಕೆ. ಶಿವಕುಮಾರ್ ಇಷ್ಟು ವರ್ಷ ಕಷ್ಟ ಪಟ್ಟು ಪಕ್ಷ ಬೆಳೆಸಿದ್ದೇನೆ. ಹೀಗಾಗಿ ನನಗೆ ಸಿಎಂ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇಬ್ಬರೂ ಕೂಡ ಸಿದ್ದರಾಮಯ್ಯ ಪರ ಇದ್ದಾರೆ ಎನ್ನಲಾಗಿದ್ದು, ಸಿಎಂ ಸ್ಥಾನ ನೀಡುವುದಾದರೆ ನೀಡಿ ಇಲ್ಲದಿದ್ದಲ್ಲಿ ಸಾಮಾನ್ಯ ಶಾಸಕನಾಗಿ ಇದ್ದು ಬಿಡುತ್ತೇನೆ ಎಂದಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಸಮಾಧಾನಪಡಿಸಲು ಸಾಕಷ್ಟು ಹೊತ್ತು ಖರ್ಗೆ ಕಸರತ್ತು ನಡೆಸಿದರು. ಈ ವೇಳೆ ನನ್ನನ್ನು ಸಿಎಂ ಮಾಡಲು ಆಗದಿದ್ದರೆ ಬಿಡಿ ನೀವೆ ಸಿಎಂ ಆಗಿ ಎಂದು ಡಿ.ಕೆ. ಶಿವಕುಮಾರ್ ಖರ್ಗೆ ಅವರಿಗೆ ಆಫರ್ ನೀಡಿದ್ದಾರೆ ಎನ್ನಲಾಗಿದೆ.