ಬೆಂಗಳೂರು: ಶಿಕಾರಿಪುರದ ಬಿ.ಎಸ್. ಯಡಿಯೂರಪ್ಪ ಮನೆ ಮೇಲೆ ನಡೆದ ದಾಳಿಯಲ್ಲಿ ಬಿಜೆಪಿ ಸಂತೋಷ ಕೂಟದ ಕೈವಾಡ ಇರುವುದು ನಿಶ್ಚಿತ ವ್ಯಂಗ್ಯವಾಡಿದೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಲ್ಲ ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ. ಆದರೂ ಅವರ ಮನೆ ಮೇಲೆ ದಾಳಿ ನಡೆದಿದೆ. ಗುಪ್ತಚರ ಇಲಾಖೆ, ಪೊಲೀಸರು ಕಣ್ಮುಚ್ಚಿ ಕುಳಿತ್ತಿದ್ದೇಕೆ ಎಂದು ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದೆ.
ಗೃಹಸಚಿವರ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಮನೆಗೆ ರಕ್ಷಣೆ ಇಲ್ಲವೆಂದರೆ ಏನರ್ಥ. ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು? ಅರಗ ಜ್ಞಾನೇಂದ್ರ ಅವರೇ ? ಇದು ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಅಥವಾ ಷಡ್ಯಂತ್ರವೇ? ಮೀಸಲಾತಿ ಅವಾಂತರಕ್ಕೆ ಹೊಣೆಗಾರರಲ್ಲದ ಬಿಎಸ್ವೈ ಮನೆ ಮೇಲೆ ದಾಳಿ ಮಾಡಿದ್ದು ಯಾರ “ಸಂತೋಷ”ದ ಕಾರಣಕ್ಕೆ? ಎಂದು ಪ್ರಶ್ನಿಸಿದೆ.
ಗೃಹಸಚಿವರ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಮನೆಗೆ ರಕ್ಷಣೆ ಇಲ್ಲವೆಂದರೆ ಏನರ್ಥ.
ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು?@JnanendraAraga ಅವರೇ?
ಇದು ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಅಥವಾ ಷಡ್ಯಂತ್ರವೇ?ಮೀಸಲಾತಿ ಅವಾಂತರಕ್ಕೆ ಹೊಣೆಗಾರರಲ್ಲದ BSYರ ಮನೆ ಮೇಲೆ ದಾಳಿ ಮಾಡಿದ್ದು ಯಾರ “ಸಂತೋಷ”ದ ಕಾರಣಕ್ಕೆ?
— Karnataka Congress (@INCKarnataka) March 28, 2023