ಬೆಂಗಳೂರು: G20 ಶೃಂಗಸಭೆಯಲ್ಲಿ ಭಾಗವಹಿಸುವ ರಾಷ್ಟ್ರಗಳ ಮುಖ್ಯಸ್ಥರಿಗೆ ರಾಷ್ಟ್ರಪತಿ ಕಚೇರಿಯಿಂದ ನೀಡಿದ ಅಧಿಕೃತ ಆಹ್ವಾನದಲ್ಲಿ ಇಂಡಿಯಾ ಪದದ ಬದಲಿಗೆ ಭಾರತದ ಅಧ್ಯಕ್ಷ ಪದವನ್ನು ಬಳಸಲಾಗಿದೆ. ಇದು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 9 ರಂದು ಔತಣಕೂಟಕ್ಕೆ G20 ವಿದೇಶಿ ನಾಯಕರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ. ಆದರೆ ಆಹ್ವಾನ ಪತ್ರಿಕೆಯಲ್ಲಿ ಇಂಡಿಯಾ ಬದಲಿಗೆ ಭಾರತದ ಅಧ್ಯಕ್ಷರು ಎಂಬ ಪದಬಳಕೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
ಇಂಡಿಯಾ’ ಎಂಬುದು ದೇಶಕ್ಕೆ ಒಪ್ಪಿತ ಪದವಾಗಿದ್ದು, ಅದನ್ನು ‘ಭಾರತ್’ ಎಂದು ಬದಲಾಯಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ಇಂಡಿಯಾ ಎಂಬ ಪದವನ್ನು ಸಂವಿಧಾನದಲ್ಲಿ ಅಳವಡಿಸಲಾಗಿದೆ ಮತ್ತು ಅದನ್ನು ‘ಭಾರತದ ಸಂವಿಧಾನ’ ಎಂದು ಕರೆಯಲಾಗುತ್ತದೆ ಎಂದು ಅವರು ತಿಳಿಸಿದರು.