News Karnataka Kannada
Monday, April 29 2024
ಬೆಂಗಳೂರು ನಗರ

ಘಾಟಿ ಸುಬ್ರಮಣ್ಯದಲ್ಲಿ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ

ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ಕ್ಷೇತ್ರದಲ್ಲಿ ಅಂತರರಾಜ್ಯ ಮಟ್ಟದ ದನಗಳ ಜಾತ್ರೆಯನ್ನು ಡಿ. 25 ರಿಂದ ಜನವರಿ 5 ರವರೆಗೆ 10 ದಿನಗಳ ಕಾಲ ನಡೆಸಲಾಗುತ್ತಿದ್ದು, ಜಾತ್ರೆಯಲ್ಲಿ ವಿವಿಧ ತಳಿಗಳ ಪ್ರದರ್ಶನ ಮತ್ತು ಮಾರಾಟ ಸಂತೆಯೂ ನಡೆಯಲಿದೆ ಎಂದು ನವ ಕರ್ನಾಟಕ ಯುವ ಶಕ್ತಿ ವೇದಿಕೆ ಅಧ್ಯಕ್ಷ, ರೈತ ಅಂಬರೀಶ್ ಹೇಳಿದ್ದಾರೆ.
Photo Credit : News Kannada

ಬೆಂಗಳೂರು: ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ಕ್ಷೇತ್ರದಲ್ಲಿ ಅಂತರರಾಜ್ಯ ಮಟ್ಟದ ದನಗಳ ಜಾತ್ರೆಯನ್ನು ಡಿ. 25 ರಿಂದ ಜನವರಿ 5 ರವರೆಗೆ 10 ದಿನಗಳ ಕಾಲ ನಡೆಸಲಾಗುತ್ತಿದ್ದು, ಜಾತ್ರೆಯಲ್ಲಿ ವಿವಿಧ ತಳಿಗಳ ಪ್ರದರ್ಶನ ಮತ್ತು ಮಾರಾಟ ಸಂತೆಯೂ ನಡೆಯಲಿದೆ ಎಂದು ನವ ಕರ್ನಾಟಕ ಯುವ ಶಕ್ತಿ ವೇದಿಕೆ ಅಧ್ಯಕ್ಷ, ರೈತ ಅಂಬರೀಶ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಮಾನಕ್ಕೂ ಮೀರಿದ ಇತಿಹಾಸ ಹೊಂದಿರುವ ದನಗಳ ಜಾತ್ರೆ ಕೋವಿಡ್‌ ಕಾರಣದಿಂದ ಎರಡು ವರ್ಷಗಳಿಂದ ನಡೆದಿರಲಿಲ್ಲ. ಆದರೆ ಈ ಬಾರಿ ವಿಶೇಷ ತಳಿಯ ಹಳ್ಳಿಕಾರ್ ಹಸುಗಳು ಸೇರಿ ಜಾತ್ರೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಜಾನುವಾರುಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಜಾತ್ರೆಗೆ ಉಚಿತ ಪ್ರವೇಶವಿದ್ದು, ನೀರು, ಮೇವು ಮತ್ತಿತರ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದರು.

40 ಎಕರೆ ವಿಸ್ತೀರ್ಣದಲ್ಲಿ ಜಾತ್ರೆಗೆ ವ್ಯವಸ್ಥೆ ಮಾಡಿದ್ದು, ರೈತರಿಗೆ ತಂಗುದಾಣದ ವ್ಯವಸ್ಥೆ, ಸೂಕ್ತ ಭದ್ರತೆ ಒದಗಿಸಲಾಗುವುದು. ಹೈದರಾಬಾದ್‌ ಕರ್ನಾಟಕ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ತಮಿಳುನಾಡಿನ ಹೊಸೂರು, ಆಂಧ್ರಪ್ರದೇಶದ ರೈತರು ಜಾನುವಾರುಗಳ ಖರೀದಿ ಮತ್ತು ಮಾರಾಟಕ್ಕಾಗಿ ಆಗಮಿಸಲಿದ್ದಾರೆ. ರೈತರು ಮತ್ತು ರಾಸುಗಳಿಗೆ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿಯಿಂದ ಸೌಕರ್ಯ ಕಲ್ಪಿಸಲಾಗುತ್ತಿದೆ. ತಾತ್ಕಾಲಿಕವಾಗಿ ಪಶುಆಸ್ವತ್ರೆ ತೆರೆದು ಜಾನುವಾರುಗಳು ಯಾವುದೇ ರೋಗಗಳಿಗೆ ತುತ್ತಾಗದಂತೆ ಲಸಿಕೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಉದಯಾರಾಧ್ಯ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು