ತುಮಕೂರು: ಮೇ 10ರಂದು ನೆಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯ ೨ನೇ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದ್ದು, ತುಮಕೂರು ನಗರ ಅಭ್ಯರ್ಥಿಯಾಗಿ ಇಕ್ಬಾಲ್ ಅಹಮದ್ ಅವರನ್ನು ಸೂಚಿಸಿ ಪಟ್ಟಿ ಬಿಡುಗಡೆ ಮಾಡಿದೆ.
ಇಂದು ಹೈಕಮಾಂಡ್ ರಾಜ್ಯದ 42ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತುಮಕೂರು ಜಿಲ್ಲೆಯಲ್ಲಿ ೨ನೇ ಪಟ್ಟಿಯಲ್ಲಿ ತುಮಕೂರು ನಗರ ಕ್ಷೇತ್ರಕ್ಕೆ ಇಕ್ಬಾಲ್ ಅಹಮದ್, ಗುಬ್ಬಿಗೆ ಎಸ್.ಆರ್ ಶ್ರೀನಿವಾಸ್ ಅವರ ಹೆಸರನ್ನು ಆಯ್ಕೆ ಮಾಡಿ ಬಿಡುಗಡೆ ಗೊಳಿಸಿದೆ. ಇನ್ನು ತುಮಕೂರು ಗ್ರಾಮಾಂತರದಕ್ಕೆ ಯಾವುದೇ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ.
ಪ್ರಮುಖವಾಗಿ ತುಮಕೂರು ನಗರ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಗಳಾಗಿದ್ದಮಾಜಿ ಶಾಸಕ ಡಾ. ರಫೀಕ್ ಅಹಮದ್ ಹಾಗೂ ಅಟ್ಟಿಕಾ ಬಾಬು, ಅತೀಕ್ ಅಹಮದ್ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಇವರ ಮುಂದಿನ ನಡೆ ಏನಾಗಿರಲಿದೆ ಎಂಬುದು ಕುತೂಹಲ ಕೆರಳಿಸಿದೆ.