ಬೆಂಗಳೂರು: ರಾಜ್ಯದಲ್ಲಿ ಕಾವೇರಿ ವಿವಾದದಂತೆ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವಿನ ಜಗಳ್ ಬಂಧಿ ಜೋರಾಗಿದೆ. ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಮೂಲಕ ಜೆಡಿಎಸ್ ತನ್ನ ಜಾತ್ಯತೀತೆಯನ್ನು ಕಳೆದುಕೊಂಡಿದೆ ಎಂದು ಟೀಕಿಸಿದ್ದ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭರ್ಜರಿಯಾಗಿ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಜಾತ್ಯತೀತ ಎನ್ನುವ ಟ್ಯಾಗ್ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರಿಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವರು ಸಿದ್ದರಾಮಯ್ಯನವರೇ ಪ್ರಶ್ನಿಸಿದ್ದಾರೆ.
ಅವರ ಬೆನ್ನು ಅವರಿಗೆ ಕಾಗುವುದಿಲ್ಲ ನಾಲಿಗೆಗೂ ಮೂಳೆ ಇರುವುದಿಲ್ಲ ಸಿಎಂ ಸೀಟಿನಲ್ಲಿ ಹಂತರೂ ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ದೋo ಸಮಾಜವಾದಿ ನೀವು ನಿಮ್ಮ ಅಡ್ಡೆಸ್ಟ್ಮೆಂಟ್ ರಾಜಕಾರಣ ಜಗತ್ವಸಿದ್ಧ INDIA ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ. ಟೀಂನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ? ಎಂದು
ಬೀಟ್ ಮಾಡಿ ಕಾಲೆಳೆದಿದ್ದಾರೆ. ಸಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಯಾ ನಿತೀಶ್ ಕುಮಾರ್, ಹೇಮರಡ್ ಸೊರೇನ್, ವೈಕೋ, ಮಹಬೂಬಾ ಮುಫ್ರಿ ಅಭ್ಯರ್ಥಿಗೆ ಶಿವಸೇನೆಯ ಉದ್ಧವ್ ಠಾಕ್ರೆ ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂದಲು ನಿಮಗೆ ನಾಚಿಕೆ ಆಗುವುದಿಲ್ಲವೆ? ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
2005ರಲ್ಲಿ ಬಿಜೆಪಿ ಜೊತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ ದೇವೇಗೌಡರ ಮನೆಗೆ ಬಂದು ಸಾಲಾಗಿ ಕಟ್ಟಿ ನಿಂತುಕೊಂದಿರಿ, ಮರೆತಿರಾ ಛದ್ಮವೇಷಧಾರಿ ನಾ, ನಿಮಗೆ ಕೋಮುವಾದ, ಜಾತೃತೀನ ಸಿದ್ಧಾಂತದ ಕನಸು ಈಗ ಬಿದಿದೆ ನಿಮ್ಮ ರಾಜಕೀಯ ಬದುಕಿಗಾಗಿ ಅತಿ-ಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕನ್ನಾಲಗೆಯಲ್ಲೇ ಬೆಳಿ ಕಾಯಿಸಿಕೊಳ್ಳುವುದನ್ನೇ ನಿಮಗೆ ಗೊತ್ತು ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ ಹೃದಯದ ಆಳದಲ್ಲಿರುವ ನಿನ್ನ ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ ಜಾತ್ಯತೀತ’ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡ ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ ಅದೂ ಜನರಿಗೆ ನಮ್ಮ ಬದ್ಧತೆ, ಚಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗತೆ ನಿಮಗೆ ಖಂಡಿತಾ ಇಲ್ಲ. ಈ DEIO ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ? ಎಂದು ಪ್ರಶ್ನಿಸಿದ್ದಾರೆ.
ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ನಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ? ಹುಸ್ ನವರು ಬಿಜೆಪಿಯ ಚಿಂತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ ಮೈತ್ರಿಯಿಂದ ಜೆಡಿಎಸ್ ಕೋಮುವಾದಿಯಾಗುತ್ತೆದ? ಅಥವಾ ಬಿಜೆಪಿ ಜಾತ್ಯತೀತ ಸಿದ್ಧಾಂತ ಅನುಸರಿಸುತ್ತಾ? ಎಂಬುದನ್ನು ಕುಮಾರಸ್ವಾಮಿ ರಾಜ್ಯದ ಜನತೆಗೆ ಸ್ಪಷ್ಟಪಡಿಸಲಿ ಎಂದು ಸಿದ್ದರಾಮಯ್ಯ ಟೀಟ್ ಮಾಡಿದ್ದರು.
ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ.
‘ ಜಾತ್ಯತೀತ ‘ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ… pic.twitter.com/MeyrSH2mHa
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 30, 2023