ಬೆಂಗಳೂರು: ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ನಟ ಜಗ್ಗೇಶ್ ಅರ್ಜಿ ಸಲ್ಲಿಸಿದ್ದು, ನೋಟಿಸ್ ರದ್ದುಪಡಿಸುವಂತೆ ಮನವಿ ಸಲ್ಲಿಸಿದ್ದಾರೆ. ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ಗೆ ಉತ್ತರ ನೀಡುವುದರೊಳಗೆ ಅವರು ನನ್ನ ಮನೆ ಶೋಧ ನಡೆಸಿದ್ದಾರೆ.
14 ಮಂದಿ ನನ್ನ ಮನೆಗೆ ಆಗಮಿಸಿ ನನ್ನ ಮನೆಯಲ್ಲಿದ್ದ ಕೆಲವು ವಸ್ತುಗಳನ್ನು ಚೆಲ್ಲಾಪೆಲ್ಲಿಯಾಗಿ ಮಾಡಿಹೋಗಿದ್ದಾರೆ ಅಂತ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಜಗ್ಗೇಶ್ ಅವರು 20ನೇ ವಯಸ್ಸಿನಲ್ಲಿದ್ದಾಗ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್ನ ಗಿಫ್ಟ್ ಆಗಿ ನೀಡಿದ್ದರು. ಇದು ಜಗ್ಗೇಶ್ ಕೊರಳಲ್ಲೇ ಇತ್ತು. ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬಳಿಕ ಜಗ್ಗೇಶ್ ಬಳಿಯೂ ಹುಲಿ ಉಗುರು ಇದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು.