ಬೆಂಗಳೂರು: ತಮ್ಮ ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸುಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ರಮೇಶ್ ಜಾರಕಿಹೊಳಿ ಪತ್ರ ಬರೆದಿದ್ದಾರೆ. ಪ್ಯಾಕ್ಸ್ ಮೂಲಕ ಪತ್ರ ರವಾನಿಸಿರುವ ರಮೇಶ್ ಜಾರಕಿಹೊಳಿ, ಸದಾಶಿವ ನಗರದ ಪೊಲೀಸ್ ಠಾಣೆಯಲ್ಲಿ ದಾವೆ ನ.0021/2021 ದಿ.13-3-2021 ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಬೆಂಗಳೂರಿನ ಮತ್ತಿಕೇರಿ ಪ್ರದೇಶದಲ್ಲಿ ಸಿಡಿ ಡೌನ್ಲೋಡ್ ಮಾಡಿ. ಸರ್ವರ್ ಮುಖಾಂತರ ರಷ್ಯಾ, ದುಬೈ, ಮತ್ತು ಇಂಗ್ಲೆಂಡ್ ನಲ್ಲಿ ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುತ್ತಾರೆ. ಇದರ ಹಿಂದೆ ಪ್ರಭಾವಿ ನಾಯಕರ ಕೈವಾಡವಿದ್ದು, ಅದನ್ನ ಪತ್ತೆ ಹಚ್ಚಲು ಸಿಬಿಐ ಮುಖಾಂತರ ಮಾತ್ರ ಸಾಧ್ಯ. ಆದ್ದರಿಂದ ಸದರೀ ದಾವೆಯನ್ನು ಕೂಡಲೇ ಸಿಬಿಐಗೆ ವಹಿಸಲು ವಿನಂತಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.