News Karnataka Kannada
Monday, May 06 2024
ಬೆಂಗಳೂರು ನಗರ

ಸೋಲಿನ ಕಹಿ: ಮಸೀದಿಗಳಿಗೆ ಕೊಟ್ಟ ದೇಣಿಗೆ ವಾಪಸ್‌ ಕೇಳಿದ ಕೆಜಿಎಫ್‌ ಬಾಬು

Kgf Babu demands return of donations made to mosques
Photo Credit : Twitter

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಎದುರಿಸಿರುವ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು 64 ಮಸೀದಿಗಳಿಗೆ ತಾನು ನೀಡಿದ ದೇಣಿಗೆ ಚೆಕ್‌ಗಳನ್ನು ವಾಪಸ್ ನೀಡುವಂತೆ ಉರ್ದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿದ್ದಾರೆ.

ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದ ಕೆಜಿಎಫ್ ಬಾಬು 64 ಮಸೀದಿಗಳ ಸಮಿತಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ್ದರು.ಸೋತ ನಂತರ ಸಮಿತಿಗಳಿಗೆ ನನ್ನ ಹಣ ಹರಾಮ್ ಆಗಿದ್ದು ಅದನ್ನು ಖರ್ಚು ಮಾಡಬೇಡಿ, ಸಾಧ್ಯವಾದಷ್ಟೂ ಬೇಗ ಅದನ್ನು ವಾಪಸ್ ಕೊಡಿ ಎಂದು ಹೇಳಿದ್ದಾರೆ.

ದಾರುಲ್ ಉಲೂಮ್ ಫತ್ವಾವನ್ನು ಉಲ್ಲೇಖಿಸಿರುವ ಬಾಬು, ಚುನಾವಣಾ ಸಮಯದಲ್ಲಿ ರಾಜಕಾರಣಿಗಳಿಂದ ಇಂತಹ ದೇಣಿಗೆಗಳನ್ನು ಪಡೆಯುವುದು ಹರಾಮ್ ಆಗಿದೆ ಎಂದು ಸಿದ್ದಾಪುರದ ಟ್ಯಾಂಕ್ ಗಾರ್ಡನ್‌ನಲ್ಲಿರುವ ಮಸೀದಿ-ಇ-ಅತಿಕ್ ಮತ್ತು ಕೃಷ್ಣಪ್ಪ ಗಾರ್ಡನ್‌ನ ಮಸೀದಿ-ಇ-ಹುಸ್ನಾ ಸೇರಿದಂತೆ ಮಸೀದಿಗಳ ಸಮಿತಿಗಳಿಗೆ ಬಾಬು ತಮ್ಮ ಚೆಕ್‌ಗಳನ್ನು ಹಿಂದಿರುಗಿಸುವಂತೆ ಹೇಳಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಬಾಬು ಅವರು ಎಲ್ಲಾ ಮಸೀದಿಗಳಿಗೆ ಆಹ್ವಾನಗಳನ್ನು ಕಳುಹಿಸಿ ಎಸ್‌ಆರ್‌ನಗರದ ಹಕ್ ಹೌಸ್‌ನಲ್ಲಿ ನಡೆದ ಸಮಾರಂಭದಲ್ಲಿ ಅವರು ಚೆಕ್‌ಗಳನ್ನು ವಿತರಿಸಿದ್ದರು. ಇದು ಅವರ ದೇಣಿಗೆಯಾಗಿದ್ದು, ಮಸೀದಿಗಳ ಅಭಿವೃದ್ಧಿಗೆ ಬಳಸಿಕೊಳ್ಳಬಹುದು ಎಂದು ಬಾಬು ಆ ಸಂದರ್ಭದಲ್ಲಿ ಹೇಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು