News Karnataka Kannada
Saturday, May 04 2024
ಬೆಂಗಳೂರು ನಗರ

ಬೆಂಗಳೂರು: ದೇಶದಾದ್ಯಂತ ಚುನಾವಣಾ ಸುಧಾರಣೆಗಳಿಗೆ ಚಾಲನೆ

Launch of electoral reforms across the country
Photo Credit : By Author

ಬೆಂಗಳೂರು: ನಾಗರಿಕರು ಚುನಾವಣಾ ಪ್ರಕ್ರಿಯೆಯಲ್ಲಿ ಸುಲಭವಾಗಿ ಭಾಗವಹಿಸಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಜಾರಿಗೆ ತಂದಿರುವ ಚುನಾವಣಾ ಸುಧಾರಣೆಗಳಿಗೆ ದೇಶದಾದ್ಯಂತ ಚಾಲನೆ ನೀಡಲಾಗಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ತಿಳಿಸಿದರು.

ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಸುಧಾರಣೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯ ಕಾರ್ಯದರ್ಶಿಗಳು, ಚುನಾವಣಾ ಸುಧಾರಣೆಗಳ ಕುರಿತು ರಾಜ್ಯದ ಜನತೆಗೆ ಅರಿವು ಮೂಡಿಸಬೇಕು. ಚುನಾವಣಾ ಸುಧಾರಣೆಗಳನ್ನು ಕಾರ್ಯಗತಗೊಳಿಸಿದರೆ ನಮ್ಮ ರಾಜ್ಯಕ್ಕೆ ಒಳ್ಳೆಯ ಹೆಸರು ಬರುತ್ತದೆ. ಆದ್ದರಿಂದ ಮೊದಲು ಸರ್ಕಾರಿ ನೌಕರರಾದ ನಾವು ಮತದಾರರ ಪಟ್ಟಿಯಲ್ಲಿ ಹೆಸರು ನಮೂದಿಸಬೇಕು ನಂತರ ಜನತೆಗೆ ಪ್ರಚಾರ ಮಾಡಬೇಕು. ಆಧಾರ್ ಜೋಡಣೆಯಾದರೆ ಯಾರೂ ಮೋಸ ಮಾಡಲು ಸಾಧ್ಯವಿಲ್ಲ. ಮತದಾನ ನಮ್ಮ ಕರ್ತವ್ಯವಾಗಿದ್ದು, ಮತದಾನ ಮಾಡಲು ಪ್ರೇರಣೆ ಮಾಡಬೇಕು ಎಂದರು.

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಮಾತನಾಡಿ, ಚುನಾವಣಾ ಸುಧಾರಣೆಯಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಯುವ ಸಮುದಾಯಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ. ಮೊದಲಿನಂತೆ ಜನವರಿ 1ರ ವರೆಗೂ ಹಾಗೂ 18ವರ್ಷ ತುಂಬಿದ ನಂತರ ಸೇರ್ಪಡೆ ಮಾಡಲು ಕಾಯುವಂತಿಲ್ಲ. 17 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಮುಂಗಡ ಅರ್ಜಿ ಸಲ್ಲಿಸುವ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಆಗಸ್ಟ್ 1 ರಿಂದ ಮತದಾರರ ನೋಂದಣಿಗಾಗಿ ಹೊಸ ಸರಳೀಕರಿಸಿದ ಅರ್ಜಿ ನಮೂನೆಗಳು ಲಭ್ಯವಿದ್ದು, ಮತದಾರರ ಪಟ್ಟಿಯ ಹೆಸರು, ಇನ್ನಿತರ ತಿದ್ದುಪಡಿಗಳಿಗಾಗಿ ಹೊಸ ನಮೂನೆ 8 ಲಭ್ಯವಿದೆ. ಮತದಾರರ ಪಟ್ಟಿಗೆ ಸ್ವಯಂ ಪ್ರೇರಿತ ಆಧಾರ್ ಜೋಡಣೆ ಸೌಲಭ್ಯ ಕಲ್ಪಿಸಲಾಗಿದೆ. ಒಂದೇ ತರಹದ ಹೆಸರು-ಫೋಟೋ ನಮೂದುಗಳನ್ನು ಹೊಂದಿರುವ ಮತದಾರರ ಪರಿಶೀಲನೆಗೆ ಆದ್ಯತೆ ನೀಡಲಾಗಿದೆ. ಮತದಾರರ ಪಟ್ಟಿಯನ್ನು ಖಾತರಿಪಡಿಸುವ ಉದ್ದೇಶದಿಂದ ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆಯನ್ನು ಆಗಸ್ಟ್ ಮಾಹೆಯಿಂದ ಪ್ರಾರಂಭಿಸಲಾಗುವುದು. 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿರುವುದಾಗಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು