ಬೆಂಗಳೂರು: ಮಲ್ಲೇಶ್ವರದ ಸ್ಯಾಂಕಿ ಕೆರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ನಮ್ಮ ಕ್ಲಿನಿಕ್ ಗೆ ಸ್ಥಳೀಯ ಶಾಸಕ ಮತ್ತು ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಭಾನುವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರು ಸ್ಯಾಂಕಿ ಕೆರೆ ನಡಿಗೆದಾರರ ಸಂಘದ ಸದಸ್ಯರ ಕೈಯಿಂದಲೇ ಈ ನೂತನ ಆಸ್ಪತ್ರೆಗೆ ಹಸಿರು ನಿಶಾನೆ ತೋರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮಲ್ಲೇಶ್ವರ ವ್ಯಾಪ್ತಿಯಲ್ಲಿ 15 ವರ್ಷಗಳ ಹಿಂದೆ ಕೇವಲ ಎರಡು ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದವು. ಈಗ ತಲಾ 7 ನಮ್ಮ ಕ್ಲಿನಿಕ್ ಮತ್ತು ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದಿವೆ ಎಂದರು.
ಇವುಗಳ ಪೈಕಿ ತಲಾ 5 ನಮ್ಮ ಕ್ಲಿನಿಕ್ ಮತ್ತು ಸಿಯುಪಿಎಚ್ಸಿ ಈಗಾಗಲೇ ಕಾರ್ಯಾರಂಭ ಮಾಡುತ್ತಿವೆ. ಉಳಿದ 4 ಆರೋಗ್ಯ ಕೇಂದ್ರಗಳು ಇನ್ನು ಕೆಲವೇ ದಿನಗಳಲ್ಲಿ ಉದ್ಘಾಟನೆಗೊಳ್ಳಲಿವೆ ಎಂದು ಅವರು ಹೇಳಿದರು.
ಸ್ಯಾಂಕಿ ಕೆರೆ ಆವರಣದಲ್ಲಿ ಬೆಳಿಗ್ಗೆ ಮತ್ತು ಸಂಜೆ ವಾಯುವಿಹಾರಕ್ಕೆ ಬರುವವರ ಸಂಖ್ಯೆ ಜಾಸ್ತಿ ಇರುತ್ತದೆ. ಹೀಗಾಗಿ ಇಲ್ಲಿನ ನಮ್ಮ ಕ್ಲಿನಿಕ್ ಬೆಳಿಗ್ಗೆ 6:45 ರಿಂದ 10:30ರವರೆಗೆ ಮತ್ತು ಸಂಜೆ 4ರಿಂದ ರಾತ್ರಿ 7 ಗಂಟೆಯವರೆಗೆ ಕಾರ್ಯ ನಿರ್ವಹಿಸುವ ಅನುಕೂಲವನ್ನು ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಆಸ್ಪತ್ರೆಯಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ತುರ್ತು ಪರಿಸ್ಥಿತಿಗಳಲ್ಲಿ ಕೂಡಲೇ ಪ್ರಥಮ ಚಿಕಿತ್ಸೆ ಮತ್ತು ಅಗತ್ಯ ಪರೀಕ್ಷೆಗಳನ್ನು ನಡೆಸಲು ಸೌಲಭ್ಯವಿದೆ. ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು. ಎಂದು ಅವರು ಹೇಳಿದರು.
ಇಂತಹ ಕ್ಲಿನಿಕ್ ಗಳನ್ನು ಬೆಂಗಳೂರು ನಗರದ ಎಲ್ಲಾ 243 ವಾರ್ಡ್ಗಳಲ್ಲಿ ಮತ್ತು ರಾಜ್ಯದ ಉಳಿದ ಭಾಗಗಳಲ್ಲಿ ಕೂಡ ಬಿಜೆಪಿ ಸರ್ಕಾರವು ಆರಂಭಿಸಿದೆ. ಇದರಿಂದ ಜನರನ್ನು ಆರೋಗ್ಯವಾಗಿ ಕಾಪಾಡುವ ವ್ಯವಸ್ಥೆ ಅಭಿವೃದ್ಧಿ ಹೊಂದಲಿದೆ ಎಂದು ಸಚಿವರು ವಿವರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಆರೋಗ್ಯಾಧಿಕಾರಿ ಡಾ.ಸುಚೇತಾ, ಉತ್ತರ ಬೆಂಗಳೂರು ಬಿಜೆಪಿ ಉಪಾಧ್ಯಕ್ಷ ಡಾ. ವಾಸು, ಮಂಡಲ ಬಿಜೆಪಿ ನಾಯಕಿ ಕಾವೇರಿ ಕೇದಾರನಾಥ್, ಸದಾಶಿವನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಇಂದೂ ಶ್ರೀಧರ್, ಲಕ್ಷ್ಮಣ್ ರಾವ್, ಜಯಪ್ರಕಾಶ್, ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…
ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…
ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್ಪಿ ಕಚೇರಿಗೆ ಬಂದಿದ್ದು,…
ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್ ಆಫ್ ಎಂಜಿನಿಯರಿಂಗ್ ಪುಣೆಯ (COEP) ಹಾಸ್ಟೆಲ್ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್ನ ಎಲ್ಲ ವಿದ್ಯಾರ್ಥಿನಿಯರು…
ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…