ಬೆಂಗಳೂರು: ಇತ್ತೀಚೆಗೆ ಯುವಕ ಯುವತಿಯರು ಪ್ರೀತಿ ಪ್ರೇಮ ಎಂದು ದಾರಿ ತಪ್ಪುತ್ತಿರುವ ಹಲವು ಪ್ರಕರಣಗಳು ನಡೆಯುತ್ತಿವೆ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಯುವಕನೊಬ್ಬ ಬೆಂಕಿ ಹಚ್ಚಿಕೊಂಡ ಘಟನೆ ಕೆಂಗೇರಿಯ ಕೊಡಿಗೆಪಾಳ್ಯದಲ್ಲಿ ನಡೆದೆ. ಜಿಗಣಿಯ ಕಲ್ಲುಬಾಳು ಗ್ರಾಮದ ಯುವಕ ರಾಕೇಶ್ ಎಂಬಾತ ಐದಾರು ವರ್ಷದಿಂದ ಓರ್ವ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಇತ್ತೀಚೆಗೆ ಯುವತಿಗೆ ಬೇರೆ ಯುವಕನ ಜೊತೆಗೆ ಮದುವೆಗೆ ಸಿದ್ದತೆ ಮಾಡಲಾಗಿತ್ತು.
ಇದರಿಂದಾಗಿ ಯುವತಿ ರಾಕೇಶ್ನನ್ನು ಅವಾಯ್ಡ್ ಮಾಡಿದ್ದಳು. ಈ ಹಿನ್ನಲೆ ಬುಧವಾರ ರಾಕೇಶ್ ಮನೆಯ ಬಳಿ ಹೋಗಿ ಪ್ರಶ್ನೆ ಮಾಡಿದ್ದ. ಈ ಸಂದರ್ಭದಲ್ಲಿ ರಾಕೇಶ್ ಹಾಗೂ ಯುವತಿ ಜೊತೆ ಗಲಾಟೆ ಆಗಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ.
ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕೂಡಲೇ ರಾಕೇಶ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ರಾಕೇಶ್ ದೇಹದ ಬಹುತೇಕ ಭಾಗಗಳು ಸುಟ್ಟು ಹೋಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ನಿನ್ನೆ ರಾತ್ರಿ ಅಸುನೀಗಿದ್ದಾನೆ.