ಮಂಡ್ಯ: ಅಕ್ಟೋಬರ್ 13 ರಿಂದ ಮಂಡ್ಯ ಜಿಲ್ಲೆಯ ಅಂಬಿಗರನಹಳ್ಳಿಯಲ್ಲಿ ನಡೆಯಲಿರುವ ಕುಂಭಮೇಳಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ರೇಸ್ ಕೋರ್ಸ್ ನಿವಾಸದಲ್ಲಿಂದು ಮಂಡ್ಯ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವರು ಆದ ಕೆ.ಗೋಪಾಲಯ್ಯ ಮತ್ತು ರೇಷ್ಮೆ, ಯುವ ಸಬಲೀಕರಣ ಖಾತೆ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅವರು ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಕಾನೂನು ಸಚಿವ ಮಾದು ಸ್ವಾಮಿ, ಗೃಹ ಸಚಿವ ಅರಗ ಜ್ಞಾನೇಂದ್ರ ಉಪಸ್ಥಿತರಿದ್ದರು.