ಬೆಂಗಳೂರು: 2019ರಲ್ಲಿ ಎಚ್ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನದ ಹಿಂದಿನ ಮೆದುಳು ಎಂದು ಪರಿಗಣಿಸಲ್ಪಟ್ಟಿರುವ ಮಂಡ್ಯ ಜಿಲ್ಲೆಯ ಮದ್ದೂರಿನ ಉದ್ಯಮಿ ಉದಯ್ ಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಅವರಿಗೆ ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಕಾಂಗ್ರೆಸ್ ಟಿಕೆಟ್ ಸಿಗುವ ಸಾಧ್ಯತೆ ಇದೆ.
ಕುತೂಹಲದ ಸಂಗತಿ ಎಂದರೆ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಇರಲಿಲ್ಲ. ಬದಲಾಗಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬರಮಾಡಿಕೊಂಡರು.
ಆಪರೇಷನ್ ಕಮಲದ ಭಾಗವಾಗಿರುವ ಉದಯ್ ಅವರನ್ನು ಪಕ್ಷಕ್ಕೆ ಹೇಗೆ ಸ್ವೀಕರಿಸುತ್ತೀರಿ ಎಂದು ಪತ್ರಕರ್ತರು ಡಿಕೆಶಿ ಅವರನ್ನು ಕೇಳಿದಾಗ, ಅವರು ಹಿಂದಿನದು ಮತ್ತು ಚುನಾವಣೆ ಸಮಯದಲ್ಲಿ ಪಕ್ಷಾಂತರ ಸಾಮಾನ್ಯ ಎಂದು ಹೇಳಿದರು.
ಹಲವು ಜೆಡಿಎಸ್ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಅದೇ ರೀತಿ ಎಲ್ಲಾ ಪಕ್ಷಗಳಲ್ಲೂ ಇಂತಹ ಪಕ್ಷಾಂತರಗಳು ವರದಿಯಾಗುತ್ತಿವೆ.