News Karnataka Kannada
Friday, May 03 2024
ಬೆಂಗಳೂರು ನಗರ

ಬೆಂಗಳೂರು: ಎಂಸಿಡಿ ಫಲಿತಾಂಶವೇ ಬಿಬಿಎಂಪಿ ಚುನಾವಣೆಯಲ್ಲಿ ಪುನರಾವರ್ತನೆ- ಮೋಹನ್‌ ದಾಸರಿ

MCD results will be repeated in BBMP elections: Mohan Dasari
Photo Credit : News Kannada

ಬೆಂಗಳೂರು: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿಯ ಗೆಲುವನ್ನು ಬೆಂಗಳೂರಿನ ಎಎಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಕುಮಾರ ಪಾರ್ಕ್‌ ಪಶ್ಚಿಮದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಸಿಹಿ ಹಂಚಿ, ನಂತರ ಅಲ್ಲಿಂದ ಬಿಬಿಎಂಪಿ ಕಚೇರಿಗೆ ಬೈಕ್‌ ರ‍್ಯಾಲಿ ನಡೆಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ, “ಸಿಎಂ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಸರ್ಕಾರದ ಸಾಧನೆಗಳನ್ನು ಕಣ್ಣಾರೆ ಕಂಡಿದ್ದರಿಂದ ದೆಹಲಿಯ ಜನತೆ ಎಂಸಿಡಿ ಚುನಾವಣೆಯಲ್ಲಿ ಸಹಜವಾಗಿಯೇ ಎಎಪಿಯನ್ನು ಗೆಲ್ಲಿಸಿದ್ದಾರೆ. ನಗರ ಪ್ರದೇಶದ ಜನರು ಆಮ್‌ ಆದ್ಮಿ ಪಾರ್ಟಿಯತ್ತ ದೊಡ್ಡ ಪ್ರಮಾಣದಲ್ಲಿ ಆಕರ್ಷಿತರಾಗುತ್ತಿರುವುದು ಎಂಸಿಡಿ ಚುನಾವಣೆಯ ಫಲಿತಾಂಶದಿಂದ ಸಾಬೀತಾಗಿದ್ದು, ಬಿಬಿಎಂಪಿ ಚುನಾವಣೆಯಲ್ಲೂ ಇದೇ ರೀತಿಯ ಫಲಿತಾಂಶ ಬರಲಿದೆ. ಬಹುಮತದೊಂದಿಗೆ ಆಮ್‌ ಆದ್ಮಿ ಪಾರ್ಟಿಯು ಬಿಬಿಎಂಪಿಯ ಅಧಿಕಾರದ ಗದ್ದುಗೆ ಏರಲಿದೆ. ಖಾಸಗಿ ಸಂಸ್ಥೆಗಳಿಂದ ಸಮೀಕ್ಷೆ ಮಾಡಿಸಿದ ಬಿಜೆಪಿ ನಾಯಕರಿಗೂ ಈ ವಿಚಾರ ಅರಿವಿಗೆ ಬಂದಿದೆ. ಆದ್ದರಿಂದಲೇ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಹೇಳಿದರು.

“ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರ ಹೊಂದಿದ್ದ ಬಿಜೆಪಿಯು ಕಳಪೆ ಕಾಮಗಾರಿಗಳ ಮೂಲಕ ದೆಹಲಿಗೆ ಕೆಟ್ಟ ಹೆಸರು ತಂದಿತ್ತು. ಅಧಿಕಾರದ ಮದದಲ್ಲಿದ್ದ ಬಿಜೆಪಿಯು ಜನರ ಭಾವನೆಗೆ ಸ್ಪಂದಿಸುವುದನ್ನೇ ಮರೆತಿತ್ತು. ಬೆಂಗಳೂರಿನಲ್ಲಿ ಕೂಡ ಬಿಜೆಪಿ ಅದೇ ತಪ್ಪುಗಳನ್ನು ಅಲ್ಲಿಗಿಂತ ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದೆ. ಬಿಜೆಪಿಗೆ ತಕ್ಕ ಪಾಠ ಕಲಿಸಲು ಬೆಂಗಳೂರಿನ ಪ್ರಜ್ಞಾವಂತ ಜನರು ಪಣತೊಟ್ಟಿದ್ದು, ಚುನಾವಣೆಗಾಗಿ ಕಾಯುತ್ತಿದ್ದಾರೆ. ಎಷ್ಟೇ ಕುತಂತ್ರಗಳನ್ನು ಮಾಡಿ ಚುನಾವಣೆಯನ್ನು ಮುಂದೂಡಿದರೂ, ಒಂದಲ್ಲಾ ಒಂದುದಿನ ಚುನಾವಣೆ ನಡೆಯಲೇ ಬೇಕು. ಯಾವಾಗ ಚುನಾವಣೆ ನಡೆದರೂ ಎಎಪಿಯೇ ಜಯಗಳಿಸಲಿದೆ” ಎಂದು ಮೋಹನ್‌ ದಾಸರಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಜಗದೀಶ್‌ ವಿ ಸದಂ, ಗುರುಮೂರ್ತಿ, ಉಷಾ ಮೋಹನ್‌, ಅಶೋಕ್‌ ಮೃತ್ಯುಂಜಯ, ಶಾಶವಲ್ಲಿ, ಲೋಹಿತ್‌, ಪಿ.ಎಸ್.ಗಿರೀಶ್‌, ಗಿರೀಶ್‌ ಪಿಳ್ಳೇಗೌಡ ಮತ್ತಿತರ ಮುಖಂಡರು ಹಾಗೂ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು