ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶದವರೆಗೂ ಕಾಡುತ್ತಿದೆ. ಈ ಬಗ್ಗೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ತಮಿಳುನಾಡಿಗೆ ನೀರಿನ ಭಾಗ್ಯ, ಪಂಚ ರಾಜ್ಯಗಳಿಗೆ ಹಣದ ಭಾಗ್ಯ, ಕರ್ನಾಟಕಕ್ಕೆ ಕತ್ತಲೆ ಭಾಗ್ಯ ಸಿಕ್ಕಿದೆ ಎಂದು ಹೇಳಿದ್ದಾರೆ.
ಸಿಎಂ, ಡಿಸಿಎಂ ಅಧಿಕಾರದ ಕಾದಾಟದ ಪರಿಣಾಮ ರಾಜ್ಯದ ಜನತೆ ತೊಂದರೆಗೆ ಸಿಲುಕಿದೆ. ಸಿದ್ದರಾಮಯ್ಯರನ್ನು ಮನೆಗೆ ಕಳಿಸಬೇಕು ಅಂತಾ ಡಿಕೆ ಶಿವಕುಮಾರ್, ಡಿಕೆ ಶಿವಕುಮಾರ್ ಅವರನ್ನು ಜೈಲಿಗೆ ಕಳಿಸಬೇಕು ಅಂತಾ ಸಿದ್ದರಾಮಣ್ಣ ಯತ್ನಿಸುತ್ತಿದ್ದಾರೆ. ಈ ಕಾದಾಟದಲ್ಲಿ ರಾಜ್ಯ ಜನರು ನರಳುವಂತಾಗಿದೆ ಎಂದರು.
ವರ್ಗಾವಣೆಯಲ್ಲಿ ರೇಟ್ ಫಿಕ್ಸ್ ಮಾಡಲಾಗುತ್ತಿದೆ. ಸಿಎಂ ಕಚೇರಿಯಲ್ಲೇ ಯಾರ್ಯಾರಿಗೆ ಎಷ್ಟೆಷ್ಟು ಅಂತಾ ಬೋರ್ಡ್ ಫಿಕ್ಸ್ ಆಗಿದೆ. ವರ್ಗಾವಣೆಯಿಂದ ಆರಂಭವಾದ ಭ್ರಷ್ಟಾಚಾರ, ಗುತ್ತಿಗೆದಾರರ ಕಮಿಷನ್, ದಸರಾ ಹಬ್ಬದಲ್ಲೂ ಲಜ್ಜೆಗೇಡಿತನದ ಸರ್ಕಾರ ಲಂಚ ಕೇಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಶಾಸಕರು ಖುಷಿಯಿಂದ ಇಲ್ಲ. ಆಂತರಿಕ ಬೇಗುದಿ ಹೊರಬರುತ್ತಿದೆ. ಬೆಳಗಾವಿಯಲ್ಲಿ ಕೆಲವರು ಬಸ್ ಹತ್ತಿರುವುದನ್ನು ತಡೆಯಲು ಉಪಮುಖ್ಯಮಂತ್ರಿ ಬೆಳಗಾವಿಗೆ ಹೋಗಿದ್ದಾರೆ. ಆದರೆ ಅವರನ್ನು ಅಲ್ಲಿ ಬಸ್ ನಿಂದ ಇಳಿಸಬಹುದು. ರಾಜ್ಯದ ಉಳಿದ 20 ಕಡೆ ಶಾಸಕರು ಬಸ್ ಹತ್ತಲು ಸಿದ್ಧವಾಗಿದ್ದಾರೆ ಎಂದರು.
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…
ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.
ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…
ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್ನೊಂದಿಗೆ ಬಂದಿದೆ.
ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…
ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…