ಬೆಂಗಳೂರು: ನೈತಿಕ ಪೊಲೀಸ್ ಗಿರಿ ಮಾಡುವವರ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದಲ್ಲಿ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ನಾಲ್ಕು ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀರಿ ಎಂದು ಗೊತ್ತಿದೆ. ಆ ತಪ್ಪು ಮರುಕಳಿಸಬಾರದು ಎಂದು ಸೂಚಿಸಿದರು. ತಾರತಮ್ಯ ಮಾಡದೆ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಚುನಾವಣೆಯಲ್ಲಿ ಯಾವ ರೀತಿ ಕೆಲಸ ಮಾಡಿದ್ದೀರಾ ಎಂದು ಗೊತ್ತಿದೆ. ಮುಂದೆ ಯಾರಿಗೂ ತಾರತಮ್ಯ ಮಾಡಬೇಡಿ. ಮುಂದೆ ಜಿಲ್ಲಾ ಎಸ್ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದರು. ಅಕ್ರಮ ನೈಟ್ ಕ್ಲಬ್ಗಳ ಮೇಲೂ ಪೊಲೀಸರು ನಿಗಾ ಇಡಬೇಕು. ಡ್ರಗ್ಸ್, ಅಕ್ರಮ ಚಟುವಟಿಕೆ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ನೈತಿಕ ಪೊಲೀಸ್ ಗಿರಿಗೆ ಅವಕಾಶ ಇಲ್ಲ: ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.