ಬೆಂಗಳೂರು: ಕಾಂಗ್ರೆಸ್ ಇರುವ ಕಡೆ ದುಷ್ಕೃತ್ಯಗಳಿಗೆ ಬೆಂಬಲ ನೀಡಲಾಗುತ್ತೆ ಎಂದು ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ಮಾಡಿದ್ದಾರೆ.
ನಗದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಗಟ್ಟಿಯಾಗಿದೆ. ಬಿಜೆಪಿ ಇರುವ ಕಡೆ ಭಯೋತ್ಪಾದನೆ ಇರುವುದಿಲ್ಲ. 10 ವರ್ಷದಿಂದ ಉಗ್ರರ ದಾಳಿಗೆ ಬಲಿಯಾದವರು ಕಡಿಮೆ ಎಂದರು. ಇವತ್ತು ಬೆಂಗಳೂರಿನಲ್ಲಿ 70 ಕಿ.ಮೀ. ಮೆಟ್ರೋ ಅಭಿವೃದ್ಧಿ ಆಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ಈ ಬಾರಿ ಇತಿಹಾಸ ನಿರ್ಮಿಸಲಿದೆ. ಕಳೆದ ಬಾರಿ ಬೆಂಗಳೂರಿನ ಇತಿಹಾಸದಲ್ಲಿ ಅತೀ ಹೆಚ್ಚು ಅಂತರದಿಂದ ಗೆದ್ದಿದ್ದೆವು. ಈ ಬಾರಿ ಸುಮಾರು 5 ಲಕ್ಷ ಅಂತರದಿಂದ ಗೆಲ್ಲುತ್ತೇವೆ ಎಂಬ ಭರವಸೆಯನ್ನು ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರಿಗೆ ನೀಡುತ್ತೇನೆ ಬಿ ವೈ ವಿಜಯೇಂದ್ರ ಅವರು ರಾಜ್ಯ ಅಧ್ಯಕ್ಷರಾದ ನಂತರ ಕಾರ್ಯಕರ್ತರಲ್ಲಿ ಸ್ಫೂರ್ತಿ ಮೂಡಿದೆ ಅದೇ ರೀತಿ ಸಿ.ಕೆ ರಾಮಮೂರ್ತಿ ಅವರು ಜಿಲ್ಲಾಧ್ಯಕ್ಷರಾದ ನಂತರ ಬೆಂಗಳೂರು ದಕ್ಷಿಣದಲ್ಲಿ ಸಂಘಟನೆಯನ್ನು ಗಟ್ಟಿ ಮಾಡುವ ಕೆಲಸವಾಗಿದೆ. ನನ್ನೆಲ್ಲಾ ಬಿಜೆಪಿ ಕಾರ್ಯಕರ್ತರ ಸಹಕಾರದೊಂದಿಗೆ, ಪ್ರೀತಿ ಹಾಗೂ ಬಲದೊಂದಿಗೆ ಈ ಬಾರಿ ಅತೀ ಹೆಚ್ಚು ಅಂತರದಿಂದ ಚುನಾವಣೆ ಗೆಲ್ಲಲಿದ್ದೇವೆ ಎಂಬ ವಿಶ್ವಾಸವನ್ನು ಈ ಮೂಲಕ ನೀಡುತ್ತೇನೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು ದಕ್ಷಿಣ ಈ ಬಾರಿ ಇತಿಹಾಸ ನಿರ್ಮಿಸಲಿದೆ. ಕಳೆದ ಬಾರಿ ಬೆಂಗಳೂರಿನ ಇತಿಹಾಸದಲ್ಲಿ ಅತೀ ಹೆಚ್ಚು ಅಂತರದಿಂದ ಗೆದ್ದಿದ್ದೆವು. ಈ ಬಾರಿ ಸುಮಾರು 5 ಲಕ್ಷ ಅಂತರದಿಂದ ಗೆಲ್ಲುತ್ತೇವೆ ಎಂಬ ಭರವಸೆಯನ್ನು ಈ ಸಂದರ್ಭದಲ್ಲಿ ಮಾನ್ಯ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ನೀಡುತ್ತೇನೆ
ಬಿ ವೈ ವಿಜಯೇಂದ್ರ ಅವರು ರಾಜ್ಯ… pic.twitter.com/kIJE2C1sIi
— Tejasvi Surya (ಮೋದಿಯ ಪರಿವಾರ) (@Tejasvi_Surya) March 17, 2024