ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ನಿಗದಿಯಾಗಿದ್ದ ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇ ಪರಿಶೀಲನಾ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.
ಮಾರ್ಚ್ 12 ರಂದು ಪಿಎಂ ಮೋದಿ ಅವರು ಉದ್ಘಾಟನೆ ಮಾಡುವ ಮೊದಲು ಈ ಎಕ್ಸ್ ಪ್ರೆಸ್ ವೇಯ ಕಾಮಗಾರಿಗಳನ್ನು ಪರಿಶೀಲಿಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಬಯಸಿದ್ದರು.
ಈ ಎಕ್ಸ್ಪ್ರೆಸ್ವೇಯ ಕಾಮಗಾರಿಗಳು ಕಳಪೆ ಗುಣಮಟ್ಟದ್ದಾಗಿವೆ ಎಂದು ಕಾಂಗ್ರೆಸ್ ದೂಷಿಸುತ್ತಿದೆ.
ಪಕ್ಷದ ಮೂಲಗಳ ಪ್ರಕಾರ, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದ ಸ್ಕ್ರೀನಿಂಗ್ ಕಮಿಟಿ ಸಭೆ ಮುಂದುವರೆದಿದ್ದರಿಂದ ಸಿದ್ದರಾಮಯ್ಯ ಕಾರ್ಯಕ್ರಮವನ್ನು ರದ್ದುಗೊಳಿಸಿದರು.