ನಾಗಮಂಗಲ: ದಳಪತಿಗಳ ಭದ್ರಕೋಟೆಯಲ್ಲಿ ಕಾಂಗ್ರೆಸ್ ಮತ ಬೇಟೆ ಆರಂಭಿಸಿದ್ದು, ಸಕ್ಕರೆನಾಡು ಮಂಡ್ಯದಲ್ಲಿ ಕಾಂಗ್ರೆಸ್ ಪ್ರಜಾ ಧ್ವನಿ ಯಾತ್ರೆ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.
ನಾಗಮಂಗಲದಲ್ಲಿ ನಡೆದ ಪ್ರಜಾ ಧ್ವನಿ ಯಾತ್ರೆಯಲ್ಲಿ ಮಾತನಾಡಿದ ಕೊಡಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್, ಜನಸಾಮಾನ್ಯರ ರೈತ ಪರವಾದ ಯೋಜನೆಗಳನ್ನು ನುಡಿದಂತೆ ನಡೆದುಕೊಳ್ಳುವ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಬೆಂಬಲ ನೀಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಜನಪರ ಯೋಜನೆಗಳನ್ನು ನೀಡಿದ್ದು, ನುಡಿದಂತೆ ನಡೆದುಕೊಂಡಿದೆ. ಈಗಲೂ ತಾವುಗಳು ಯಾವುದೇ ಕನಿಕರದ ಮಾತುಗಳನ್ನು ನಂಬದೇ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸುವ ಮುಖಾಂತರ ಅಭಿವೃದ್ಧಿ ಯೋಜನೆಗಳಿಗೆ ಹೊಸ ಭವಿಷ್ಯ ರೂಪಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ನಾಗಮಂಗಲ ತಾಲೂಕು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ಇತರೆ ಪಕ್ಷಗಳು ನಮ್ಮದೇ ಸರ್ಕಾರ ರಚನೆ ಮಾಡುತ್ತೇವೆ ಎಂದರೂ ಅವು ಅಧಿಕಾರ ಬರುವುದಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಚೆಲುವರಾಯಸ್ವಾಮಿ, ಗಂಗಾಧರ್ ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.