ಬೆಂಗಳೂರು: ಕೆಲ ದಿನಗಳ ಹಿಂದೆ ನಂದಿನಿ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುತ್ತಿರೋದಾಗಿ ಕೆ ಎಂಎಫ್ ನಿಂದ ಘೋಷಣೆ ಮಾಡಲಾಗಿತ್ತು. ಆದ್ರೇ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು ಬ್ರೇಕ್ ಹಾಕಿದ್ದರು.
ಈ ಬಳಿಕ ಸಭೆ ನಡೆಸಿ ಯಾವುದೇ ತೊಂದರೆಯಾಗದಂತೆ ದರ ಹೆಚ್ಚಳಕ್ಕೆ ಸಭೆಯಲ್ಲಿ ಸಲಹೆ ಮಾಡಿದ್ದರು. ಸಿಎಂ ಸಲಹೆಯಂತೆ ಇಂದು ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ.
ಈ ಕುರಿತಂತೆ ಇಂದಿನ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ( KMF President Balachandra Jarkiholi ) ನೇತೃತ್ವದಲ್ಲಿ ನಂದಿನ ಉತ್ಪನ್ನಗಳ ( Nandini Product ) ದರ ಹೆಚ್ಚಳ ಸಂಬಂಧ ಮಹತ್ವದ ಸಭೆಯನ್ನು ನಡೆಸಲಾಯಿತು.
ಈ ಸಭೆಯಲ್ಲಿ ಹಲವು ಅಧಿಕಾರಿಗಳು, ನಾಯಕರು ಭಾಗಿಯಾಗಿದ್ದರು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಂದಿನಿ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ ಸೌಲಭ್ಯವನ್ನು ರೈತರು ಪಡೆಯಲಿದ್ದಾರೆ ಎಂಬುದಾಗಿ ಹೇಳಿದ್ದಾರೆ.
ಈ ಮೂಲಕ ಕೊನೆಗೂ ಅಳೆದು ತೂಗಿ ನಂದಿನ ಹಾಲು, ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ.
ನಂದಿನಿ ಹಾಲು ಮೊಸರಿನ ದರ ಪ್ರತಿ ಲೀಟರ್ ಗೆ ಎರಡು ರೂಪಾಯಿ ಹೆಚ್ಚಾದ ಹಿನ್ನೆಲೆ ಮಾಜಿ ಎಂಎಲ್ಸಿ ಐವನ್ ಡಿಸೋಜಾರ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂದಿನಿ ಹಾಲಿನ ಬೂತಿನ ಎದುರುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದ್ದಾರೆ.