ಬೆಂಗಳೂರು: ಕಾಂಗ್ರೆಸ್ ನಾಯಕ ಹರಿಪ್ರಸಾದ್ ವಿವಾದಿತ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಹರಿಪ್ರಸಾದ್’ಗೆ ಯಾವುದೇ ನೋಟಿಸ್ ಕೊಡಲ್ಲ ಎಂದು ಹೇಳಿದ್ದಾರೆ.
ಹರಿಪ್ರಸಾದ್ ಹೇಳಿಕೆ ಬಗ್ಗೆ ಗೃಹ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಅಂತಹ ಮಾಹಿತಿ ಬಂದರೆ, ಅದನ್ನ ಹ್ಯಾಂಡಲ್ ಮಾಡೋಕೆ ನಮ್ಮ ಇಲಾಖೆ ಸಮರ್ಥವಾಗಿ ಇದೆ. ಅಂತಹ ಘಟನೆಗಳು ಆಗೋಕೆ ನಾವು ಬಿಡೊಲ್ಲ. ಸಂದರ್ಭ ಬಂದರೆ ಹರಿಪ್ರಸಾದ್ ಅವರನ್ನ ಕರೆದು ಬೇಕಿದ್ರೆ ಕೇಳೋಣ ಎಂದು ಹೇಳಿದರು.
ಹರಿಪ್ರಸಾದ್ಗೆ ನೋಟಿಸ್ ಕೊಟ್ಟು ಕರೆಯೋ ಅವಶ್ಯಕತೆ ಇಲ್ಲ. ಹೇಳಿಕೆ ಕೊಟ್ಟವರಿಗೆಲ್ಲಾ ನೋಟಿಸ್ ಕೊಡೋಕೆ ಹೋದ್ರೆ ಎಷ್ಟು ಜನರಿಗೆ ನೋಟಿಸ್ ಕೊಡಬೇಕಾಗುತ್ತೆ ಎಂದರು.