ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ಚುರುಕು ಗೊಳ್ಳುವ ಆಶಾಭಾವನೆಯಿದ್ದು ರೈತರಿಗೆ ಬೇಕಿರುವ ಅಗತ್ಯ ಬಿತ್ತನೆ ಬೀಜ ಮತ್ತು ಗೊಬ್ಬರ ಸಾಕಷ್ಟು ದಾಸ್ತಾನಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಳೆದ ಮೂರ್ನಾ ಲ್ಲು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಮಳೆ ಕೊರತೆಯಾಗಿರುವುದು ಕಂಡುಬಂದಿದೆ. ಆದರೆ ವಾರದ ಹಿಂದೆ ಶೇ.೫೦ ರಿಂದ ೬೦ ರಷ್ಟು ಮಳೆಯ ಕೊರತೆ ಕಂಡುಬಂದಿತ್ತು. ಆದರೆ ಮೊನ್ನೆಯಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊರತೆ ಶೇ.೩೫ಕ್ಕೆ ಇಳಿ ದಿದೆ. ಮುಂದಿನ ದಿನಗಳಲ್ಲಿ ಈ ಕೊರತೆಯು ಸರಿಹೋಗುವ ಆಶಾಭಾವನೆಯಿದೆ ಎಂದರು.
ರೈತರಿಗೆ ಬೇಕಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ಅಗತ್ಯಕ್ಕಿಂತ ಹೆಚ್ಚು ದಾಸ್ತಾನಿರುವುದು ಕಂಡುಬಂದಿದೆ. ಇದರಿಂದಾಗಿ ಈ ಬಾರಿ ರೈತರಿಗೆ ಯಾ ವುದೇ ಸಮಸ್ಯೆಯಾಗುವುದಿಲ್ಲ ಎಂದರು.
ಮಳೆ ಕೊರತೆ ಹಿನ್ನೆಲೆಯಲ್ಲಿ ಇಂದು ಕಿಗ್ಗಾಕ್ಕೆ ತೆರಳಿ ಮಳೆ ದೇವರಿಗೆ ಪ್ರಾರ್ಥನೆ ಸಲ್ಲಿಸಿ ನಂತರ ಶೃಂಗೇರಿ ಶ್ರೀಶಾರದಾಂಬೆ ದರ್ಶನ ಪಡೆದು ಸ್ವಾಮೀಜಿಯವರಿಂದ ಆರ್ಶೀವಾದ ಪಡೆದಿದ್ದೇನೆ ಎಂದರು.
ಮುಂದಿನ ದಿನಗಳಲ್ಲಿ ಜಿಲ್ಲೆಗೆ ಭೇಟಿ ನೀಡುವ ಮೂಲಕ ಎಲ್ಲಾ ಶಾಸ ಕರಗಳೊಂದಿಗೆ ಇಲಾಖೆಯ ಅಧಿಕಾರಿ ಗಳ ಸಭೆ ನಡೆಸಿ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದರು.
ಕೃಷಿ ಇಲಾಖೆಯಲ್ಲಿ ಖಾಯಿರುವ ಹುದ್ದೆಗಳನ್ನು ಒಮ್ಮೆಲೇ ಭರ್ತಿ ಮಾ ಡುವುದು ಸಾಧ್ಯವಾಗುವುದಿಲ್ಲ. ಅಗತ್ಯವಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಯಲುಪ್ರದೇಶದಲ್ಲಿ ಈ ಮೊದಲು ಬರಗಾಲದ ವಾತಾವರಣವಿದ್ದ ಕಾರಣ ಕೆಲವು ಬೆಳೆಗಳನ್ನು ಭಿತ್ತನೆ ಮಾಡಲು ಸಾಧ್ಯವಾಗದಿರುವ ಬಗ್ಗೆ ಅವರ ಗಮನಕ್ಕೆ ತಂದಾಗ ಅಂತಹ ರೈತರಿಗೆ ವಿಮೆ ಯೋಜನೆಯಡಿ ಪರಿಹಾರ ಪಡೆಯಲು ಅವಕಾಶವಿರುತ್ತದೆ ಎಂದರು.
ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಕೃಷಿ ಭಾಗ್ಯ ಯೋ ಜನೆಯನ್ನು ಹಿಂದಿನ ಸರ್ಕಾರ ರದ್ದು ಪಡಿಸಿತ್ತು. ಈಗ ಮತ್ತೆ ನಮ್ಮ ಸರ್ಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು ಈ ಮೂಲಕ ರಾಜ್ಯದ ರೈತರ ಸರ್ವಾತೋಮುಖ ಅಭಿವೃದ್ದಿಗೆ ನಾವು ಬದ್ದರಾಗಿದ್ದೇವೆ ಎಂದರು.