News Karnataka Kannada
Wednesday, May 08 2024
ಬೆಂಗಳೂರು ನಗರ

ತೆಲಂಗಾಣದಲ್ಲಿ ಅಕ್ಕಿ ಸಂಗ್ರಹ ಇಲ್ಲ: ಛತ್ತೀಸ್‌ಗಢದತ್ತ ಮುಖ ಮಾಡಿದ ರಾಜ್ಯ ಸರ್ಕಾರ

People have rejected bjp, RSS ideology: CM
Photo Credit : News Kannada

ಬೆಂಗಳೂರು: ಕರ್ನಾಟಕಕ್ಕೆ ನೀಡಲು ಅಗತ್ಯವಿರುವಷ್ಟು ಗುಣಮಟ್ಟದ ಅಕ್ಕಿಯ ದಾಸ್ತಾನು ಇಲ್ಲ ಎಂದು ತೆಲಂಗಾಣ ರಾಜ್ಯ ಸರ್ಕಾರ ಹೇಳುವುದರೊಂದಿಗೆ ಕರ್ನಾಟಕಕ್ಕೆ ಅನ್ನಭಾಗ್ಯಕ್ಕೆ ಅಕ್ಕಿ ಹೊಂದಿಸುವುದು ಸಮಸ್ಯೆಯಾಗಿ ಪರಿಣಮಿಸಿದೆ. ಇದೀಗ ಸರ್ಕಾರ ಛತ್ತೀಸ್‌ಗಢದತ್ತ ಮುಖ ಮಾಡಿದೆ.

ಅನ್ನಭಾಗ್ಯ ಯೋಜನೆ ಜಾರಿ ಮಾಡಲು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದೆ. ಈ ಪೈಕಿ ಛತ್ತೀಸ್‌ಗಢದಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿರುವುದಾಗಿ ತಿಳಿದುಬಂದಿದೆ. ಈ ಅಕ್ಕಿಯನ್ನು ಖರೀದಿ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಒಂದು ವೇಳೆ ಅಕ್ಕಿ ನೀಡಲು ಸಾಧ್ಯವಾಗದಿದ್ದರೆ, ಅಕ್ಕಿಯ ಪ್ರಮಾಣ ಇಳಿಸಿ, ಅದರ ಬದಲಾಗಿ ಜೋಳ ಮತ್ತು ರಾಗಿ ಪರಿಹಾರವಾಗಿ ನೀಡುವ ಕುರಿತು ಚಿಂತನೆ ನಡೆಯುತ್ತಿದೆ.

ಜುಲೈ 1ರಂದು ‘ಅನ್ನ ಭಾಗ್ಯ’ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸರಕಾರ ಈ ಮೊದಲು ಹೇಳಿತ್ತು. ಆದರೆ ಕೇಂದ್ರ ಅಕ್ಕಿ ಕೊಡಲೊಪ್ಪದ ಕಾರಣ ಜುಲೈ 1ಕ್ಕೆ ಯೋಜನೆ ಪ್ರಾರಂಭಿಸುವುದು ಅಸಾಧ್ಯ. ಹೊಸ ದಿನಾಂಕವನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ಶನಿವಾರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಛತ್ತೀಸ್‌ಗಢದಲ್ಲಿ 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿದೆ. ಆದರೆ ಸಾಗಾಣಿಕೆ ವೆಚ್ಚ ಹೆಚ್ಚಾಗಲಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮೊದಲಿಗೆ ತೆಲಂಗಾಣ ರಾಜ್ಯ ಸಂಪರ್ಕಿಸಿದ ಸಿದ್ದರಾಮಯ್ಯ ಅವರು, ಅಲ್ಲಿನ ಮುಖ್ಯಮಂತ್ರಿಯೊಂದಿಗೆ ಖುದ್ದು ಮಾತುಕೆ ನಡೆಸಿದರು. ಆದರೆ, ಅಲ್ಲಿನ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅಗತ್ಯವಿರುವಷ್ಟು ಅಕ್ಕಿ ನಮ್ಮ ಬಳಿ ಇಲ್ಲ ಎಂದು ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು