ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಹಾಡಹಗಲೇ ದುಷ್ಕರ್ಮಿಗಳಿಂದ ಶಿರಶ್ಚೇದನಕ್ಕೊಳಗಾದ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ʻಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ. ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಅಲ್ಲಿನ ರಾಜ್ಯ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕುʼ ಎಂದು ಆಗ್ರಹಿಸಿದ್ದಾರೆ.
ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ.
ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ.
ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು.
ಅಲ್ಲಿನ ರಾಜ್ಯ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.
— Siddaramaiah (@siddaramaiah) June 28, 2022