ಬೆಂಗಳೂರು: ಶೀಘ್ರವೇ ವೇತನ ಆಯೋಗ ರಚನೆ- ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.

ವಿಧಾನ ಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ “ರಾಜ್ಯ ಸರ್ಕಾರಿ ನೌಕರರ ದಿನಾಚರಣೆ” ಅಂಗವಾಗಿ ಸರ್ಕಾರಿ ಸೇವೆಯಲ್ಲಿ ಅತ್ಯುನ್ನತ ಸೇವೆಗೈದ ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುವ ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಸರ್ಕಾರಿ ನೌಕರರು ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂಪಾಯಿ ನೀಡಿ, ಗೋವುಗಳನ್ನು ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.

ಸರ್ಕಾರಿ ನೌಕರರು, ಸರ್ಕಾರದ ಪ್ರಮುಖವಾದ ಒಂದು ಭಾಗ ಮತ್ತು ಅಂಗ. ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಆದಕಾರಣ, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದು ಸರ್ಕಾರಿ ನೌಕರರಿಗೆ ತಿಳಿಸಿದರು.

ರಾಜ್ಯ ಸರ್ಕಾರದ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ “ರಾಜ್ಯ ಸರ್ಕಾರಿ ನೌಕರರ ದಿನಾಚರಣೆ”ಯ ಈ ಸುಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ, 30 ನೌಕರರಿಗೆ ತಲಾ ಐವತ್ತು ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು.

Gayathri SG

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

6 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

30 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago