News Karnataka Kannada
Monday, April 29 2024
ಬೆಂಗಳೂರು ನಗರ

ರೈಲು ಹಳಿಮೇಲೆ ಕಲ್ಲು ಇರಿಸಿದ ಬಾಲಕನ ಛಳಿ ಬಿಡಿಸಿದ ಜನರು

People remove the chill of a boy who placed a stone on the railway track
Photo Credit : News Kannada

ಬೆಂಗಳೂರು: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 275 ಜನರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಕರ್ನಾಟಕದಲ್ಲಿ ಅಪ್ರಾಪ್ತ ಬಾಲಕನೊಬ್ಬ ರೈಲ್ವೇ ಹಳಿಗಳ ಮೇಲೆ ಕಲ್ಲು ಇಡುತ್ತಿರುವ ವಿಡಿಯೋ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಟ್ರ್ಯಾಕ್‌ನ ಭಾಗದಲ್ಲಿ ಕಲ್ಲುಗಳನ್ನು ಹಾಕಿದ ಹುಡುಗನನ್ನು ಜನರು ಹಿಡಿದು ಪ್ರಶ್ನಿಸುತ್ತಿರುವುದನ್ನು ವೀಡಿಯೊದಲ್ಲಿದೆ. ಈ ಪೈಕಿ ಓರ್ವ ಬಾಲಕನನ್ನು ಎಳೆದುಕೊಂಡು ಹೋಗಿ ರೈಲು ಹಳಿಯಿಂದ ಕಲ್ಲುಗಳನ್ನು ತೆಗೆಯುವಂತೆ ಮಾಡುತ್ತಾನೆ. ಟ್ರ್ಯಾಕ್ ಮೇಲೆ ಕಲ್ಲು ಹಾಕಿದ್ದು ಏಕೆ, ಎಷ್ಟು ದಿನಗಳಿಂದ ಹೀಗೆ ಮಾಡುತ್ತಿದ್ದೀ ಎಂದು ಜನರು ಬಾಲಕನನ್ನು ಪ್ರಶ್ನಿಸಿದಾಗ, ಇದೇ ಮೊದಲ ಬಾರಿಗೆ ಈ ರೀತಿ ಮಾಡಿದ್ದೇನೆ ಎಂದು ಬಾಲಕ ಹೇಳಿದ್ದಾನೆ. ಅಲ್ಲದೆ ನಾನು ಯಾರ ಪ್ರಚೋದನೆಯಿಂದ ಈ ಕೆಲಸ ಮಾಡುತ್ತಿಲ್ಲ ಎಂದು ಹೇಳುತ್ತಿರುವುದು ದಾಖಲಾಗಿದೆ. ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬ ಈ ಬಾಲಕನನ್ನು ಪೊಲೀಸರಿಗೆ ಒಪ್ಪಿಸಬೇಕು ಎಂದು ಹೇಳಿದಾಗ, ಬಾಲಕ ಆತನ ಪಾದಗಳನ್ನು ಮುಟ್ಟಿ ಪೊಲೀಸರಿಗೆ ಒಪ್ಪಿಸಬೇಡಿ ಎಂದು ಮನವಿ ಮಾಡುತ್ತಾನೆ.

ಉದ್ಯಮಿ ಎಂದು ಹೇಳಿಕೊಳ್ಳುವ ಅರುಣ್ ಪುದೂರ್ ಎಂಬ ಟ್ವಿಟ್ಟರ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಈ ವಿಷಯವನ್ನು ಪರಿಶೀಲಿಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

“ಇದೊಂದು ಗಂಭೀರ ವಿಚಾರ. ಕರ್ನಾಟಕದಲ್ಲಿ ಅಪ್ರಾಪ್ತ ಬಾಲಕನೊಬ್ಬ ರೈಲ್ವೇ ಹಳಿ ಹಾಳು ಮಾಡಿ ಸಿಕ್ಕಿಬಿದ್ದಿದ್ದಾನೆ. ನಮ್ಮಲ್ಲಿ ಹತ್ತಾರು ಕಿಲೋಮೀಟರ್ ರೈಲ್ವೇ ಹಳಿಗಳಿವೆ. ಇಂತಹ ಕೃತ್ಯ ಹಲವರ ಜೀವ ತೆಗೆಯಲಿದೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಇಂತಹ ಕೃತ್ಯ ಮಾಡಲು ಮಕ್ಕಳಿಗೆ ತರಬೇತಿ ನೀಡುತ್ತಿರುವವರು ಯಾರು ಎಂದು ಪುದೂರು ಪ್ರಶ್ನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು