ಬೆಂಗಳೂರು: ಬೆಂಗಳೂರಿನ ಬಹು ನಿರೀಕ್ಷಿತ ವೈಟ್ಫೀಲ್ಡ್ (ಕಾಡುಗೋಡಿ) ನಿಂದ ಕೃಷ್ಣರಾಜಪುರಂ (ಕೆಆರ್ ಪುರಂ) ವರೆಗೆ 4,249 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಮೆಟ್ರೋ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.
12 ನಿಲ್ದಾಣಗಳನ್ನು ಹೊಂದಿರುವ 13.71 ಕಿಮೀ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ ನಂತರ, ಪ್ರಧಾನ ಮಂತ್ರಿ ಅವರು ಶಾಲಾ ಮಕ್ಕಳು, ಬೆಂಗಳೂರು ಮೆಟ್ರೋಪಾಲಿಟನ್ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (BMRCL) ಸಿಬ್ಬಂದಿ ಮತ್ತು ನಿರ್ಮಾಣ ಕಾರ್ಮಿಕರೊಂದಿಗೆ ಸವಾರಿ ಮಾಡಿದರು. ಈ ವಿಸ್ತರಣೆಯು ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಮೂಲಕ ಜನರಿಗೆ ಅಗತ್ಯವಾದ ಸಹಾಯವನ್ನು ಒದಗಿಸುತ್ತದೆ.
ಮೆಟ್ರೋದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಮೆಟ್ರೋದ ಮಹಿಳಾ ಚಾಲಕರೊಂದಿಗೆ ಮಾತನಾಡಿದರು. ಪ್ರಯಾಣದ ಸಮಯದಲ್ಲಿ ಬಿಎಂಆರ್ಸಿಎಲ್ ಸಿಬ್ಬಂದಿ, ಕಟ್ಟಡ ಕಾರ್ಮಿಕರೊಂದಿಗೆ ಕುಳಿತು ಪ್ರಯಾಣಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಮೆಟ್ರೋ ಪ್ರಯಾಣದಲ್ಲಿ ಜೊತೆಗಿದ್ದರು.