ಬೆಂಗಳೂರು: ಬೆಂಗಳೂರಿನ ಬಹು ನಿರೀಕ್ಷಿತ ವೈಟ್ಫೀಲ್ಡ್ (ಕಾಡುಗೋಡಿ) ನಿಂದ ಕೃಷ್ಣರಾಜಪುರಂ (ಕೆಆರ್ ಪುರಂ) ವರೆಗೆ 4,249 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಮೆಟ್ರೋ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.
12 ನಿಲ್ದಾಣಗಳನ್ನು ಹೊಂದಿರುವ 13.71 ಕಿಮೀ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದ ನಂತರ, ಪ್ರಧಾನ ಮಂತ್ರಿ ಅವರು ಶಾಲಾ ಮಕ್ಕಳು, ಬೆಂಗಳೂರು ಮೆಟ್ರೋಪಾಲಿಟನ್ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (BMRCL) ಸಿಬ್ಬಂದಿ ಮತ್ತು ನಿರ್ಮಾಣ ಕಾರ್ಮಿಕರೊಂದಿಗೆ ಸವಾರಿ ಮಾಡಿದರು. ಈ ವಿಸ್ತರಣೆಯು ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಮೂಲಕ ಜನರಿಗೆ ಅಗತ್ಯವಾದ ಸಹಾಯವನ್ನು ಒದಗಿಸುತ್ತದೆ.
ಮೆಟ್ರೋದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಮೆಟ್ರೋದ ಮಹಿಳಾ ಚಾಲಕರೊಂದಿಗೆ ಮಾತನಾಡಿದರು. ಪ್ರಯಾಣದ ಸಮಯದಲ್ಲಿ ಬಿಎಂಆರ್ಸಿಎಲ್ ಸಿಬ್ಬಂದಿ, ಕಟ್ಟಡ ಕಾರ್ಮಿಕರೊಂದಿಗೆ ಕುಳಿತು ಪ್ರಯಾಣಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಮೆಟ್ರೋ ಪ್ರಯಾಣದಲ್ಲಿ ಜೊತೆಗಿದ್ದರು.
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…
ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್ ನಾಯಕ ಮಣಿಶಂಕರ್ ಐಯ್ಯರ್ ಹೇಳಿಕೆಗೆ…
2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…
ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…
ಯಾರು ಮೋದಿಗೆ ವೋಟ್ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…
ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…