ಬೆಂಗಳೂರು: ಇದೀಗ ಎಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದೆ. ರಾಜಕಾರಣಿಗಳು, ನಟರು ದೀಪಾವಳಿ ಆಚರಿಸಿದ ಫೋಟೋವನ್ನು ಜಾಲತಾಣಗಳಲ್ಲಿ ಹಂಚಿಕೊಂಡು ಸಂಭ್ರಮ ಪಡುತ್ತಿದ್ದಾರೆ. ಆದರೆ ಇದೀಗ ರಾಜ್ಯದ ಪ್ರಮುಖ ರಾಜಕಾರಣಿಯೊಬ್ಬರ ಮನೆಗೆ ದೀಪಾವಳಿ ಅಲಂಕಾರ ಮಾಡಲು ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ವಿಚಾರ ಚರ್ಚೆಗೆ ಗ್ರಾಸವಾಗಿದೆ.
ಹೌದು ನಿನ್ನೆಯಷ್ಟೇ ವಿದ್ಯುತ್ ಸಮಸ್ಯೆ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ( ವಾಗ್ದಾಳಿ ನಡೆಸಿದ್ದರು. ಆದ್ರೆ, ಇದೀಗ ಮನೆಗೆ ವಿದ್ಯುತ್ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪ ಕೇಳಿಬಂದಿದೆ. ಹೌದು…ಇಂದು ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ನಿವಾಸಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಆದ್ರೆ, ವಿದ್ಯುತ್ ಅನ್ನು ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆಯಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ವಿಡಿಯೋವೊಂದನ್ನು ಟ್ವೀಟ್ನಲ್ಲಿ ಕರ್ನಾಟಕ ಕಾಂಗ್ರೆಸ್ ಹಂಚಿಕೊಂಡು ಕುಮಾರಸ್ವಾಮಿ ಅವರನ್ನು ಟೀಕಿಸಿದೆ.
ಟ್ವೀಟ್ನಲ್ಲಿ ಏನಿದೆ:
ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ! ಎಚ್ ಡಿ ಕುಮಾರಸ್ವಾಮಿ ಅವರೇ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ,
ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ!. ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು “ಬರ” ಎದುರಿಸುತ್ತಿದ್ದೀರಾ?. ಅದೇನೋ ಪತ್ರಿಕಾಗೋಷ್ಠಿ ನಡೆಸಿ “ಕರ್ನಾಟಕ ಕತ್ತಲಲ್ಲಿದೆ“ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ, ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?! ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಪ್ರಶ್ನಿಸಿದೆ.
ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ.
ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ!@hd_kumaraswamy ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್… pic.twitter.com/7GKHeRyQuS
— Karnataka Congress (@INCKarnataka) November 14, 2023