ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕರ್ನಾಟಕ ಪ್ರವಾಸಕ್ಕಾಗಿ ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಅಧಿಕಾರಿಗಳು ಸ್ವಾಗತಿಸಿದರು.
ಇಲ್ಲಿಂದ ಪ್ರಧಾನಿಯವರು ಭಾರತೀಯ ವಿಜ್ಞಾನ ಸಂಸ್ಥೆಯ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಐಐಎಸ್ಸಿ ಕಾರ್ಯಕ್ರಮದ ನಂತರ ಮೋದಿ ಅವರು ಮಧ್ಯಾಹ್ನ, ಡಾ.ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ ಮಾಡಲಿದ್ದಾರೆ.
ಈ ಕಾರ್ಯಕ್ರಮದ ನಂತರ ಪ್ರಧಾನಿಯವರು ವಿಶೇಷ ಹೆಲಿಕಾಪ್ಟರ್ನಲ್ಲಿ ಸಂಜೆ ಮೈಸೂರಿಗೆ ತೆರಳಲಿದ್ದಾರೆ. ‘ಬೆಂಗಳೂರಿನ ಕಾರ್ಯಕ್ರಮದಲ್ಲಿ, ₹27,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ ‘ಸುಗಮ ಜೀವನ’ಕ್ಕೆ ನೆರವಾಗಲಿದೆ’ ಎಂದು ಪ್ರಧಾನಿ ಹೇಳಿದ್ದಾರೆ.
ಕರುನಾಡಿನಲ್ಲಿ ನಮೋ.#KarnatakaWelcomesModiJi pic.twitter.com/HeRJhv5AHN
— BJP Karnataka (@BJP4Karnataka) June 20, 2022