ಬೆಂಗಳೂರು: ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖಾಸಗಿ ಸಂಸ್ಥೆಯೊಂದರ ವ್ಯವಸ್ಥಾಪಕನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು, ಕೆಆರ್ ಪುರಂ ನಿವಾಸಿ ಸೈಯದ್ ಅಕ್ರಮ್ (37) ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿದ್ದರು. ಆದರೆ ಅಂದು ಪತಿ ಬೇರೊಂದು ಕೆಲಸದ ನಿಮಿತ್ತ ರಜೆ ತೆಗೆದುಕೊಂಡಿದ್ದು. ಈ ವೇಳೆ ಅಕ್ರಮ್ ಕರೆ ಮಾಡಿ ಆಕೆಯನ್ನು ಹೋಟೆಲ್ಗೆ ಊಟಕ್ಕೆ ಆಹ್ವಾನಿಸಿದರು, ಕಂಪನಿಯ ಇತರ ಸಹೋದ್ಯೋಗಿಗಳು ಸಹ ಬರುತ್ತಾರೆ ಎಂದು ಹೇಳಿದ್ದಾನೆ. ನಂತರ ಅಕ್ರಂ ಕಚೇರಿ ಬಳಿ ಬಂದು ಆಕೆಯನ್ನು ತನ್ನ ಬೈಕ್ನಲ್ಲಿ ತನ್ನ ಮನೆಗೆ ಕರೆದೊಯ್ದನು, ಅಲ್ಲಿ ಆತನ ಕುಟುಂಬ ಸದಸ್ಯರು ಇರಲಿಲ್ಲ ರೇಪ್ ಮಾಡಿದ ನಂತರ ನವರಂಗ್ ಸರ್ಕಲ್ ಬಳಿ ಆಕೆಯನ್ನು ಇಳಿಸಿ ಹೋಗಿದ್ದಾನೆ.
ನಡೆದ ಘಟನೆ ಬಗ್ಗೆ ಪತಿ ಬಳಿ ತಿಳಿಸಿದಳು. ನಂತರ ಇವರು ಮ್ಯಾನೇಜರ್ ವಿರುದ್ಧ ದೂರು ದಾಖಲಿಸಿದ್ದಾರೆ. ಕೂಡಲೇ ಕಚೇರಿ ಬಳಿ ಆರೋಪಿಯನ್ನು ಬಂಧಿಸಲಾಯಿತು.