ಬೆಂಗಳೂರು: ಸರ್ಕಾರದ ವಿರುದ್ಧ ಸೆಪ್ಟೆಂಬರ್ 11ಕ್ಕೆ ಬೆಂಗಳೂರು ಬಂದ್ಗೆ ಕರೆ ನೀಡಿರುವ ಖಾಸಗಿ ಸಾರಿಗೆ ಒಕ್ಕೂಟಗಳು ಸಿಡಿದೆದ್ದಿವೆ. ಸೆಪ್ಟೆಂಬರ್ 11ಕ್ಕೆ 32 ಖಾಸಗಿ ಸಾರಿಗೆ ಒಕ್ಕೂಟಗಳು ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಸರ್ಕಾರದ ಶಕ್ತಿ ಯೋಜನೆ ಜಾರಿ ಬಳಿಕ ಖಾಸಗಿ ಸಾರಿಗೆ ಸಂಕಷ್ಟ ಸಿಲುಕಿವೆ. ಖಾಸಗಿ ಸಾರಿಗೆ ಒಕ್ಕೂಟ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಲಿಲ್ಲ. ಹೀಗಾಗಿ ಸರ್ಕಾರ ವಿರುದ್ದ ಖಾಸಗಿ ಸಾರಿಗೆ ಸಮರ ಸಾರಿವೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟಗಳು ನಡೆಸುತ್ತಿರುವ ಬೆಂಗಳೂರು ಬಂದ್ಗೆ ಓಲಾ ಊಬರ್ ಚಾಲಕರು ಮತ್ತು ಮಾಲೀಕರ ಸಂಘ ಬೆಂಬಲ ಸೂಚಿಸಿದೆ. ಪರಿಣಾಮ ಸೆಪ್ಟೆಂಬರ್ 11ರಂದು ಆಟೋ, ಟ್ಯಾಕ್ಸಿ, ಓಲಾ, ಊಬರ್ ಓಡಾಟ ಸ್ತಬ್ಧವಾಗಲಿದೆ. ಭಾನುವಾರ ರಾತ್ರಿ 12 ಗಂಟೆಯಿಂದಲೇ ಸೇವೆ ಬಂದ್ ಆಗಲಿದೆ.
ಪ್ರತಿಭಟನೆಗೆ ಖಾಸಗಿ ಬಸ್ಗಳ ಮಾಲೀಕರು ಆಗಮಿಸಲಿದ್ದಾರೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದರು.
ರ್ಯಾಪಿಡೋ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯಲು ನಾವು ಬಂದ್ ಬೆಂಬಲ ನೀಡ್ತೇವೆ ಎಂದು ಓಲಾ ಊಬರ್ ಚಾಲಕರು ಮತ್ತು ಮಾಲೀಕರ ಸಂಘ ಬೆಂಬಲ ಸೂಚಿಸಿದೆ.