ಬೆಂಗಳೂರು: ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಕ್ಕಿ ಕೊಲ್ಲುತಿತ್ತು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಎಮರ್ಜೆನ್ಸಿ ತಂದಿದ್ದಾರೆ. ವಿಪಕ್ಷಗಳು ದೇಶದ್ರೋಗಿಗಳ ಬಂಧನ ಮಾಡಿ ಅಂತ ಧರಣಿ ಮಾಡುತ್ತಿವೆ. ಆದರೆ ಸರ್ಕಾರ ಇದುವರೆಗೂ ಯಾರನ್ನ ಬಂಧನ ಮಾಡಿಲ್ಲ. ನಾವು ಸದನದಲ್ಲಿ ಧರಣಿ ಮಾಡಿದರೂ ಸೆನ್ಸಾರ್ ಹಾಕಿದ್ರು ಎಂದು ವಾಗ್ದಾಳಿ ನಡೆಸಿದರು.
ನಮ್ಮ ಸರ್ಕಾರ ಇದ್ದಿದ್ರೆ ಪಾಕ್ ಪರ ಘೋಷಣೆ ಕೂಗಿದವರನ್ನ ಅಲ್ಲೇ ಗುಂಡಿಟ್ಟು ಸಾಯಿಸ್ತಿತ್ತು. ಇವರು ಬಂಧನ ಕೂಡಾ ಮಾಡದೇ ರಕ್ಷಣೆ ಮಾಡ್ತಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ.